Saturday, July 25, 2026
Saturday, July 25, 2026

ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

Date:

ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ (20 ರೂ.), ಕಸಿ ಗೇರು (32 ರೂ.), ಕಾಳುಮೆಣಸು (11 ರೂ.), ತೆಂಗು (70 ರೂ.) ಹಾಗೂ ಮಲ್ಲಿಗೆ ಗಿಡಗಳನ್ನು ಉತ್ಪಾದಿಸಲಾಗುತ್ತಿದ್ದು, ಗಿಡಗಳನ್ನು ಖರೀದಿಸಲು ಸಂಬಂಧಪಟ್ಟ ತೋಟಗಾರಿಕಾ ಕ್ಷೇತ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಶಿವಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಕಾಳುಮೆಣಸು, ನಿಂಬೆ, ಪುನರ್ಪುಳಿ, ಲವಂಗ, ಜಾಯಿಕಾಯಿ ಹಾಗೂ ಇತರೆ ಅಲಂಕಾರಿಕ ಗಿಡಗಳು ಮತ್ತು ಕಾರ್ಕಳದ ರಾಮಸಮುದ್ರ ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ, ಕಸಿಗೇರು, ಗಿಡಗಳು ಲಭ್ಯವಿದ್ದು, ಸಹಾಯಕ ತೋಟಗಾರಿಕೆ ನಿರ್ದೇಶಕ ವರುಣ ಕೆ.ಜೆ ಮೊ.ನಂ: 7892326323, ಬ್ರಹ್ಮಾವರದ ವಾರಂಬಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ ಹಾಗೂ ಕಸಿಗೇರು ಗಿಡಗಳು ಲಭ್ಯವಿದ್ದು, ಸಹಾಯಕ ತೋಟಗಾರಿಕಾ ಅಧಿಕಾರಿ ಅಮಿತ್ ಸಿಂಪಿ ಮೊ.ನಂ: 8970642283, ಕುಂದಾಪುರದ ಕೆದೂರು ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ, ಕಾಳುಮೆಣಸು, ಕಸಿಗೇರು, ಮಲ್ಲಿಗೆ ಹಾಗೂ ನಿಂಬೆ ಗಿಡಗಳು ಲಭ್ಯವಿದ್ದು, ಸಹಾಯಕ ತೋಟಗಾರಿಕಾ ಅಧಿಕಾರಿ ಮಧುಕರ್ ಮೊ.ನಂ: 9482166313 ಹಾಗೂ ಕುಂಭಾಶಿ ತೋಟಗಾರಿಕಾ ಕ್ಷೇತ್ರದಲ್ಲಿ ಕಸಿಗೇರು, ಕಾಳುಮೆಣಸು, ಮಲ್ಲಿಗೆ ಹಾಗೂ ತೆಂಗಿನ ಸಸಿಗಳು ಲಭ್ಯವಿದ್ದು, ಸಹಾಯಕ ತೋಟಗಾರಿಕಾ ಅಧಿಕಾರಿ ಉಮೇಶ್ ಬಂಟ್ ಮೊ.ನಂ: 8792644127, ಕಾರ್ಕಳದ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ ಹಾಗೂ ಕಸಿಗೇರು ಗಿಡಗಳು ಲಭ್ಯವಿದ್ದು, ಸಹಾಯಕ ತೋಟಗಾರಿಕಾ ಅಧಿಕಾರಿ ಕುಮಾರ್ ಮೊ.ನಂ: 8970642283 ಅನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಥವಾ ತಾಲೂಕು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!