Saturday, October 19, 2024
Saturday, October 19, 2024

ಜ.8: ಉಡುಪಿಯಲ್ಲಿ ಪುತ್ತಿಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ

ಜ.8: ಉಡುಪಿಯಲ್ಲಿ ಪುತ್ತಿಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ

Date:

ಉಡುಪಿ, ಜ.3: ಪೊಡವಿಗೊಡೆಯ ಅನ್ನಬ್ರಹ್ಮ ಶ್ರೀಕೃಷ್ಣ ಮತ್ತು ಶ್ರೀ ಮುಖ್ಯಪ್ರಾಣ ದೇವರ ಪೂಜಾ ದ್ವೈವಾರ್ಷಿಕ ಪರ್ಯಾಯದ 502 ನೇ ವರ್ಷದ ಶುಭಸಂದರ್ಭದಲ್ಲಿ ಶ್ರೀ ಪುತ್ತಿಗೆ ಉಪೇಂದ್ರತೀರ್ಥ ಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರೊಡಗೂಡಿ ಶ್ರೀ ಮಧ್ವ ವಾದಿರಾಜರ ಸತ್ಸಂಪ್ರದಾಯದಂತೆ ಚತುರ್ಥ ಬಾರಿಗೆ ಜನವರಿ 18 ರ ಬೆಳಿಗ್ಗೆ ಸರ್ವಜ್ಞಪೀಠಾರೋಹಣ ಮಾಡಲಿದ್ದಾರೆ. ಆ ಪ್ರಯುಕ್ತ ಸ್ವಾಮೀಜಿಯವರು ಪರ್ಯಾಯ ಪೂರ್ವಭಾವಿಯಾಗಿ ದೇಶ-ವಿದೇಶಗಳಲ್ಲಿ ಸಂಚರಿಸಿ, ಪ್ರಸಿದ್ಧ 48 ತೀರ್ಥಕ್ಷೇತ್ರಗಳ ಮಂಡಲಯಾತ್ರೆ ಪೂರೈಸಿ ಜನವರಿ 8 ಸೋಮವಾರ ಉಡುಪಿಗೆ ಪುರಪ್ರವೇಶಗೈಯಲಿದ್ದಾರೆ.

ಸಾಂಪ್ರದಾಯಿಕ ಮೆರವಣಿಗೆ: ಜನವರಿ 8 ರಂದು ಅಪರಾಹ್ನ 3.30 ಗಂಟೆಗೆ ಜೋಡುಕಟ್ಟೆಯಿಂದ ಸಾಂಪ್ರದಾಯಿಕ ಮೆರವಣಿಗೆಯ ಮೂಲಕ ಶ್ರೀಮಠದ ಸಕಲ ಗೌರವಗಳೊಂದಿಗೆ ಶ್ರೀಪಾದರನ್ನು ಬರಮಾಡಿಕೊಳ್ಳಲಾಗುವುದು. ಪುರಪ್ರವೇಶ ಮೆರವಣಿಗೆಯು ಜೋಡುಕಟ್ಟೆ-ಕೆ.ಎಂ. ಮಾರ್ಗ-ತ್ರಿವೇಣಿ ವೃತ್ತ-ಸಂಸ್ಕೃತ ಕಾಲೇಜು ರಸ್ತೆ-ರಥಬೀದಿಯಾಗಿ ಸಾಗಿಬರಲಿದೆ. ಬಳಿಕ ಉಭಯ ಶ್ರೀಗಳು ಶ್ರೀ ಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ, ಶ್ರೀ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆಯಲಿದ್ದಾರೆ. ಬಳಿಕ ಶ್ರೀಮಠವನ್ನು ಪ್ರವೇಶಿಸಲಿರುವ ಉಭಯ ಶ್ರೀಗಳು ರಥಬೀದಿಯ ‘ಆನಂದತೀರ್ಥ’ ವೇದಿಕೆಯಲ್ಲಿ ಸಂಜೆ 7 ಗಂಟೆಗೆ ಪೌರಸಮ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!