Saturday, October 19, 2024
Saturday, October 19, 2024

ಕುಂದಾಪುರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ

ಕುಂದಾಪುರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ

Date:

ಕುಂದಾಪುರ, ಜ. 4: ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕಿಶೋರ ಯಕ್ಷಗಾನ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿಯವರು, ಮುಂದಿನ ದಿನದಲ್ಲಿ ಕ್ಷೇತ್ರದ ಎಲ್ಲಾ ಪ್ರೌಢಶಾಲೆಗಳಲ್ಲೂ ಯಕ್ಷಗಾನದ ತರಬೇತಿಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಲಭ್ಯವಾಗಲಿ ಎಂದರು.

ಕುಂದಾಪುರ ತಹಶೀಲ್ದಾರರಾದ ಶೋಭಾಲಕ್ಷ್ಮಿ ಶುಭ ಹಾರೈಸಿದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಯಕ್ಷಗಾನ ಕಲಾರಂಗ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಪ್ರತಿಷ್ಠಿತ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ಗೌತಮ್ ಶೆಟ್ಟಿ, ಉದ್ಯಮಿ ಸೂರ್ಯಕಾಂತ ದಾಪೇಧರ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ಉಪಸ್ಥಿತರಿದ್ದರು.

ಪ್ರದರ್ಶನ ಸಂಘಟನಾ ಸಮಿತಿ ಕುಂದಾಪುರ ಇದರ ಕಾರ್ಯದರ್ಶಿ ಶಂಕರ ಅಂಕದಕಟ್ಟೆ ಸ್ವಾಗತಿಸಿ, ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಯಕ್ಷ ಟ್ರಸ್ಟ್ ನ ನಾರಾಯಣ ಹೆಗಡೆ ವಂದಿಸಿದರು. ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ರಾಮಶ್ವಮೇಧ ಕಥಾನಕದ ಯಕ್ಷಗಾನ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...
error: Content is protected !!