Tuesday, February 25, 2025
Tuesday, February 25, 2025

‘ವಿದ್ಯಾರ್ಥಿ ಮಿತ್ರ’ ಸಿ.ಇ.ಟಿ ಅರ್ಜಿ ತರಬೇತಿ ಉದ್ಘಾಟನೆ

‘ವಿದ್ಯಾರ್ಥಿ ಮಿತ್ರ’ ಸಿ.ಇ.ಟಿ ಅರ್ಜಿ ತರಬೇತಿ ಉದ್ಘಾಟನೆ

Date:

ಉಡುಪಿ. ಜ.4: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ‘ವಿದ್ಯಾರ್ಥಿ ಮಿತ್ರ’ ಸಿ.ಇ.ಟಿ. ಅರ್ಜಿ- 2024, ಇದನ್ನು ತುಂಬುವ ವಿಷಯದಲ್ಲಿ ತರಬೇತಿ ಕಾರ್ಯಕ್ರಮ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ಖಾಸಗಿ, ಅನುದಾನಿತ, ಸರ್ಕಾರಿ, ಸಿ.ಬಿ.ಎಸ್.ಇ ಹಾಗೂ ಐ.ಸಿ.ಎಸ್.ಇ 11 ಮತ್ತು 12ನೇ ತರಗತಿಯ ವಿಜ್ಞಾನ ವಿಷಯದ ಎಲ್ಲಾ ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ಆಯೋಜಿಸಿದ ತರಬೇತಿ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಮಾರುತಿ ಉದ್ಘಾಟಿಸಿದರು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಮಾಡುವ ತಪ್ಪುಗಳ ಪರಿಣಾಮವನ್ನು ಮನದಟ್ಟು ಮಾಡಿ ಶಿಕ್ಷಕರು ಮಕ್ಕಳನ್ನು ತರಬೇತಿಗೊಳಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಮಾತನಾಡಿ, ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು. ವಿದ್ಯಾರ್ಥಿಗಳ ಮನಸ್ಸನ್ನು ಗೆದ್ದು ಅವರ ಬಾಳಿಗೆ ಬೆಳಕಾದಲ್ಲಿ ಮಕ್ಕಳು ಮುಂದೆ ಸಮಾಜಕ್ಕೆ ದಾರಿ ದೀಪವಾಗುತ್ತಾರೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸಕರಾದ ಪಿ.ಕೇಶವ, ಅನಿಲ್ ಕುಮಾರ್, ಡಾ. ಅರುಣ್, ಡಾ. ಶ್ರೀಕಾಂತ್, ಡಾ. ಸಹನಾ, ಡಾ. ವಿಶಾಲಾಕ್ಷಿ, ಪ್ರಿಯಕಾರಿಣಿ, ಪೂರ್ಣಿಮ ಭಾಗವಹಿಸಿದರು. ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ, ಸಂಸ್ಥೆಯ ಸಿಇಒ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್ ಸ್ವಾಗತಿಸಿ, ಶಮಿತಾ ನಿರೂಪಿಸಿದರು. ಸಂತೋಷ ನೆಲ್ಲಿಕಾರು ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!