Sunday, February 23, 2025
Sunday, February 23, 2025

ಪಠ್ಯದೊಂದಿಗೆ ಪೂರಕ ಕೋರ್ಸುಗಳು ವಿಕಸನಕ್ಕೆ ಅತಿ ಅಗತ್ಯ: ಡಾ. ಗಣನಾಥ ಶೆಟ್ಟಿ ಎಕ್ಕಾರು

ಪಠ್ಯದೊಂದಿಗೆ ಪೂರಕ ಕೋರ್ಸುಗಳು ವಿಕಸನಕ್ಕೆ ಅತಿ ಅಗತ್ಯ: ಡಾ. ಗಣನಾಥ ಶೆಟ್ಟಿ ಎಕ್ಕಾರು

Date:

ಉಡುಪಿ: ಪದವಿಯೊಂದಿಗೆ ಇಂದಿನ ವೃತ್ತಿ ಜೀವನಕ್ಕೆ ಮೃದು ಕೌಶಲ್ಯಗಳು ಅತಿ ಮುಖ್ಯ. ಕೌಶಲ್ಯಗಳ ಅಭಿವೃದ್ಧಿಯೇ ನಿಜವಾದ ವ್ಯಕ್ತಿ ವಿಕಸನ ಎಂದು ಸಂಪನ್ಮೂಲ ವ್ಯಕ್ತಿಗಳಾದ ಸಾಂಗವಿ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ವಾಣಿಜ್ಯಶಾಸ್ತ್ರ ವಿಭಾಗ ಇಲ್ಲಿ ಮೃದು ಕೌಶಲ್ಯ ಮತ್ತು ವೃತ್ತಿ ವಿಕಸನ ಪೂರಕ ಕೋರ್ಸಿನ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ ಪಠ್ಯದೊಂದಿಗೆ ಈ ರೀತಿಯ ಪೂರಕ ಕೋರ್ಸುಗಳು ವಿದ್ಯಾರ್ಥಿಗಳ ವ್ಯಕ್ತಿ ವಿಕಸನಕ್ಕೆ ಅತಿ ಅಗತ್ಯ ಎಂದರು.

ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ. ಟಿ.ಜಿ. ಭಟ್ ಶುಭ ಹಾರೈಸಿದರು. ಸಹ ಪ್ರಾಧ್ಯಾಪಕಿ ಡಾ. ಮೇವಿ ಮಿರಾಂದ ಪ್ರಸ್ತಾವಿಕ ಮಾತುಗಳನ್ನಾಡಿದರು. ಐ.ಕ್ಯೂ.ಎ.ಸಿ ಸಂಚಾಲಕ ಡಾ. ಸುರೇಶ್ ರೈ ಕೆ, ಸಹ ಪ್ರಾಧ್ಯಾಪಕ ಡಾ. ಉದಯ ಶೆಟ್ಟಿ ಕೆ., ಉದ್ಯೋಗ ಮಾಹಿತಿ ಘಟಕದ ಸಂಚಾಲಕ ಪ್ರೊ. ಉಮೇಶ್ ಪೈ ಸಂಪನ್ಮೂಲ ವ್ಯಕ್ತಿಗಳಾದ ಶ್ರೇಯಾ, ವಿದ್ಯಾಶ್ರೀ ಮತ್ತು ರಂಜಿತ ಉಪಸ್ಥಿತರಿದ್ದರು.

ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿದ್ಯಾರ್ಥಿಗಳಾದ ರೀನಾ ಸ್ವಾಗತಿಸಿ, ಜಾಸ್ಮಿನ್ ವಂದನಾರ್ಪಣೆಗೈದರು. ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!