Sunday, July 26, 2026
Sunday, July 26, 2026

ಪಠ್ಯದೊಂದಿಗೆ ಪೂರಕ ಕೋರ್ಸುಗಳು ವಿಕಸನಕ್ಕೆ ಅತಿ ಅಗತ್ಯ: ಡಾ. ಗಣನಾಥ ಶೆಟ್ಟಿ ಎಕ್ಕಾರು

ಪಠ್ಯದೊಂದಿಗೆ ಪೂರಕ ಕೋರ್ಸುಗಳು ವಿಕಸನಕ್ಕೆ ಅತಿ ಅಗತ್ಯ: ಡಾ. ಗಣನಾಥ ಶೆಟ್ಟಿ ಎಕ್ಕಾರು

Date:

ಉಡುಪಿ: ಪದವಿಯೊಂದಿಗೆ ಇಂದಿನ ವೃತ್ತಿ ಜೀವನಕ್ಕೆ ಮೃದು ಕೌಶಲ್ಯಗಳು ಅತಿ ಮುಖ್ಯ. ಕೌಶಲ್ಯಗಳ ಅಭಿವೃದ್ಧಿಯೇ ನಿಜವಾದ ವ್ಯಕ್ತಿ ವಿಕಸನ ಎಂದು ಸಂಪನ್ಮೂಲ ವ್ಯಕ್ತಿಗಳಾದ ಸಾಂಗವಿ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ವಾಣಿಜ್ಯಶಾಸ್ತ್ರ ವಿಭಾಗ ಇಲ್ಲಿ ಮೃದು ಕೌಶಲ್ಯ ಮತ್ತು ವೃತ್ತಿ ವಿಕಸನ ಪೂರಕ ಕೋರ್ಸಿನ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ ಪಠ್ಯದೊಂದಿಗೆ ಈ ರೀತಿಯ ಪೂರಕ ಕೋರ್ಸುಗಳು ವಿದ್ಯಾರ್ಥಿಗಳ ವ್ಯಕ್ತಿ ವಿಕಸನಕ್ಕೆ ಅತಿ ಅಗತ್ಯ ಎಂದರು.

ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ. ಟಿ.ಜಿ. ಭಟ್ ಶುಭ ಹಾರೈಸಿದರು. ಸಹ ಪ್ರಾಧ್ಯಾಪಕಿ ಡಾ. ಮೇವಿ ಮಿರಾಂದ ಪ್ರಸ್ತಾವಿಕ ಮಾತುಗಳನ್ನಾಡಿದರು. ಐ.ಕ್ಯೂ.ಎ.ಸಿ ಸಂಚಾಲಕ ಡಾ. ಸುರೇಶ್ ರೈ ಕೆ, ಸಹ ಪ್ರಾಧ್ಯಾಪಕ ಡಾ. ಉದಯ ಶೆಟ್ಟಿ ಕೆ., ಉದ್ಯೋಗ ಮಾಹಿತಿ ಘಟಕದ ಸಂಚಾಲಕ ಪ್ರೊ. ಉಮೇಶ್ ಪೈ ಸಂಪನ್ಮೂಲ ವ್ಯಕ್ತಿಗಳಾದ ಶ್ರೇಯಾ, ವಿದ್ಯಾಶ್ರೀ ಮತ್ತು ರಂಜಿತ ಉಪಸ್ಥಿತರಿದ್ದರು.

ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿದ್ಯಾರ್ಥಿಗಳಾದ ರೀನಾ ಸ್ವಾಗತಿಸಿ, ಜಾಸ್ಮಿನ್ ವಂದನಾರ್ಪಣೆಗೈದರು. ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!