Sunday, September 22, 2024
Sunday, September 22, 2024

ಕರಾವಳಿ ಜಿಲ್ಲೆಗಳ ಮೀನುಗಾರಿಕೆ ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಯೋಜನೆ: ಯಶ್ಪಾಲ್ ಸುವರ್ಣ ಮನವಿ

ಕರಾವಳಿ ಜಿಲ್ಲೆಗಳ ಮೀನುಗಾರಿಕೆ ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಯೋಜನೆ: ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ: ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಮೀನುಗಾರರ ಹಲವು ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಮುಂಬರುವ 2022- 23ನೇ ಸಾಲಿನ ಬಜೆಟ್ ನಲ್ಲಿ ವಿಶೇಷ ಯೋಜನೆ ರೂಪಿಸುವಂತೆ ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಪರವಾಗಿ ಮೀನುಗಾರಿಕೆ ಸಚಿವರಾದ ಅಂಗಾರ ರವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಮೀನುಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ಜರಗಿದ ಮೀನುಗಾರಿಕೆ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮೀನುಗಾರರ ಬಹುದಿನಗಳ ಬೇಡಿಕೆಗಳಾದ ರಾಜ್ಯ ಮಾರಾಟ ಕರಮುಕ್ತ ಡೀಸೆಲ್ ಕೋಟಾ ಹೆಚ್ಚಳ, ಸೀ ಆಂಬ್ಯುಲೆನ್ಸ್ ಮತ್ತು ತುರ್ತು ಚಿಕಿತ್ಸಾ ಘಟಕ, ಕಾಪು ತೀರದಲ್ಲಿ ನಾಡದೋಣಿ ತಂಗಲು ಇಳಿದಾಣ ಕೇಂದ್ರ, ಬಂದರು ಹೂಳು ತೆಗೆಯಲು ಇಲಾಖೆ ವತಿಯಿಂದ ಡ್ರೆಜ್ಜರ್ ಖರೀದಿ, ಮೀನುಗಾರರಿಗೆ 1 ಲಕ್ಷದ ವರೆಗೆ ಶೂನ್ಯ ಬಡ್ಡಿದರ ಸಾಲ ಯೋಜನೆ, ನಾಡ ದೋಣಿಗಳಿಗೆ ಸೀಮೆ ಏಣ್ಣೆ ಪ್ರಮಾಣ ಹೆಚ್ಚಳ, ನಾಡ ದೋಣಿಗಳಿಗೆ ಇಲೆಕ್ಟ್ರಿಕಲ್ ಇಂಜಿನ್ ಪರಿವರ್ತನೆಗೆ ಸಹಾಯಧನ, ಮೀನುಗಾರರ ಸಹಕಾರಿ ಸಂಘಗಳ ಸಾಲ ಮನ್ನಾ, ಮತ್ಸ್ಯ ಮಹಿಳಾ ಸ್ವಾವಲಂಬನೆ ಯೋಜನೆ ಸಹಿತ ಹಲವು ಯೋಜನೆಗಳಿಗೆ ಬಜೆಟ್ ನಲ್ಲಿ ಅನುದಾನ ಒದಗಿಸಿ ಮೀನುಗಾರಿಕೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಮಾ, ನಿರ್ದೇಶಕರಾದ ರಾಮಾಚಾರ್ಯ, ಅಪರ ನಿರ್ದೇಶಕರಾದ ತಿಪ್ಪೇಸ್ವಾಮಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಎಂ ಕೆ., ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಷನ್ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!