Sunday, October 27, 2024
Sunday, October 27, 2024

ತೆಂಕನಿಡಿಯೂರು: ಸ್ವಾಮಿ ವಿವೇಕಾನಂದ ಜಯಂತಿ

ತೆಂಕನಿಡಿಯೂರು: ಸ್ವಾಮಿ ವಿವೇಕಾನಂದ ಜಯಂತಿ

Date:

ಮಲ್ಪೆ, ಜ.13: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ಆಂತರಿಕ ಗುಣಮಟ್ಟ ಭರವಸಾ ಕೋಶ, ಇತಿಹಾಸ ಸ್ನಾತಕೋತ್ತರ ವಿಭಾಗ, ಇಂಗ್ಲೀಷ್ ಸ್ನಾತಕೋತ್ತರ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆಯ ಅಂಗವಾಗಿ ವಿವೇಕಾನಂದರು ಮತ್ತು ರಾಷ್ಟ್ರೀಯತೆ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಇಂಗ್ಲೀಷ್ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ ವಿಭಾಗ ಸಂಯೋಜಕರಾದ ಡಾ. ಪ್ರಸಾದ್ ರಾವ್ ಎಂ. ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ವಿವೇಕಾನಂದರು ಮತ್ತು ರಾಷ್ಟ್ರೀಯತೆ ಕುರಿತಂತೆ ಮಾತನಾಡುತ್ತಾ, ವಿವೇಕಾನಂದರು ಈ ದೇಶದ ಆಧ್ಯಾತ್ಮಿಕ ನಾಯಕರು ಮಾತ್ರವಲ್ಲದೆ, ಎಲ್ಲಾ ಧರ್ಮಗಳ ಸಮನ್ವಯ ಚಿಂತಕರು, ಭಾರತ ದೇಶದ ಹಿಂದೂ ಧರ್ಮ, ಸಂಸ್ಕೃತಿಯ ಶ್ರೇಷ್ಠತೆಯನ್ನು ಸಾರಿದ ವಿಶ್ವಮಾನ್ಯರು ಹಾಗೂ ವಿವೇಕಾನಂದರ ಚಿಂತನೆಗಳ ಪ್ರಸ್ತುತೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ವಿವೇಕಾನಂದರ ಜನ್ಮದಿನಾಚರಣೆಯ ಪ್ರಾಮುಖ್ಯತೆಯನ್ನು ತಿಳಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಘವ ನಾಯ್ಕ, ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ, ಕನ್ನಡ ವಿಭಾಗ ಸಹಾಯಕ ಪ್ರಾಧ್ಯಾಪಕಿ ರತ್ನಮಾಲಾ, ವಾಣಿಜ್ಯಸ್ತ್ರ ವಿಭಾಗದ ಮುಖ್ಯಸ್ಥ ತಿಮ್ಮಣ್ಣ ಜಿ. ಭಟ್ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಅಧ್ಯಕ್ಷರಾದ ನಿಶಾ ಉಪಸ್ಥಿತರಿದ್ದರು. ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಉಪನ್ಯಾಸಕರು ಭಾಗವಹಿಸಿದ್ದರು. ದ್ವಿತೀಯ ಎಂ.ಎ. ಇತಿಹಾಸದ ವಿದ್ಯಾರ್ಥಿ ದಿನೇಶ ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಎಂ.ಎ. ಇಂಗ್ಲೀಷ್ ವಿಭಾಗದ ವಿದ್ಯಾರ್ಥಿನಿ ಮನೀಷಾ ಸ್ವಾಗತಿಸಿ, ದ್ವಿತೀಯ ಇತಿಹಾಸ ವಿಭಾಗದ ವಿದ್ಯಾರ್ಥಿ ಯಶವಂತ ವಂದಿಸಿದರು. ಇಂಗ್ಲೀಷ್ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (ಅ.26) ಚಿನ್ನದ ದರ

GOLD 22KT- 7,360 8 GRAMS- 58,880

ಕೆ.ಎಂ.ಸಿ. ಮಣಿಪಾಲ: ಜಾಗೃತಿ ನಡಿಗೆ

ಮಣಿಪಾಲ, ಅ.26: ಪ್ರತಿವರ್ಷ ಅಕ್ಟೋಬರ್‌ನ ಎರಡನೇ ಶನಿವಾರದಂದು, ಉಪಶಾಮಕ ಆರೈಕೆ ಅಗತ್ಯಗಳೊಂದಿಗೆ...

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶ

ಕೋಟ, ಅ.26: ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ,...

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...
error: Content is protected !!