Wednesday, February 26, 2025
Wednesday, February 26, 2025

ಜ. 22: ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ರಾಮನಾಮ ತಾರಕಮ್

ಜ. 22: ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ರಾಮನಾಮ ತಾರಕಮ್

Date:

ಉಡುಪಿ, ಜ.20: ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಜನವರಿ 22ರ ಸೋಮವಾರದಂದು ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣಪ್ರತಿಷ್ಠೆಯ ಸಂಭ್ರಮಾಚರಣೆಯ ಪರ್ವಕಾಲದಲ್ಲಿ ಬೆಳಗ್ಗೆ ಕ್ಷೇತ್ರದಲ್ಲಿ ರಾಮನಾಮ ತಾರಕ ಮಂತ್ರ ಹೋಮವು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಸಂಜೆ ಗಂಟೆ 4 ರಿಂದ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಹೆಸರಾಂತ ಕಲಾವಿದರ ಕೂಡುವಿಕೆಯೊಂದಿಗೆ ವಿವಿಧ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳು ಡಾ. ಅರವಿಂದ ಹೆಬ್ಬಾರ್ ಅವರ ನೇತೃತ್ವದಲ್ಲಿ ನೆರವೇರಲಿದೆ.

ಸಂಜೆ ಗಂಟೆ ನಾಲ್ಕರಿಂದ ಶ್ರೀಮತಿ ಚಂದ್ರಕಲಾ ಶರ್ಮಾ ಕೊರಂಗ್ರಪಾಡಿ ಅವರಿಂದ ರಾಮನಾಮ ಸಂಕೀರ್ತನೆ, ಸಂಜೆ ಗಂಟೆ 5 ರಿಂದ ಕೆಮ್ಮಣ್ಣು ಸಿಸ್ಟರ್ಸ್ ಕುಮಾರಿ ಸುಮೇದ ಹಾಗೂ ಕುಮಾರಿ ಶರಣ್ಯ ಅವರಿಂದ ರಾಮದುನ್ ಸಂಗೀತ ಕಾರ್ಯಕ್ರಮ, ಸಂಜೆ ಗಂಟೆ ಆರರಿಂದ ಧಾರ್ಮಿಕ ಸಭೆ ನಡೆಯಲಿದ್ದು ಶ್ರೀ ಮದಚ್ಚುತ ಪ್ರೇಕ್ಷಾಚಾರ್ಯ ಮಹಾಸಂಸ್ಥಾನ ಭೀಮನಕಟ್ಟೆಯ ಮಠಾಧಿಪತಿಗಳಾದ ಶ್ರೀ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದಂಗಳವರು ಆಶೀರ್ವಚನ ನೀಡಿ ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಉಡುಪಿಯ ಶಾಸಕರಾದ ಯಶ್ಪಾಲ್ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಂಜೆ ಗಂಟೆ 6:30 ರಿಂದ ಅಲ್ಲಿ ನೋಡಲು ರಾಮ ಸಂಗೀತ ರೂಪಕ ಖ್ಯಾತ ಕಲಾವಿದ ವಿನಯ್ ವಾರಣಾಸಿ ಬೆಂಗಳೂರು ಅವರಿಂದ ನೆರವೇರಲಿದ್ದು ಕುಮಾರಿ ಅರ್ಚನಾ ಹಾಗೂ ಸಮನ್ವಿ ಹಾಡುಗಾರಿಕೆಯಲ್ಲಿ ವೈಯಲಿನ್ನಲ್ಲಿ ಶ್ರುತಿ ಸಿಬಿ ಮೈಸೂರು ಹಾಗೂ ಮೃದಂಗದಲ್ಲಿ ನಿಕ್ಷಿತ್, ತಬಲಾದಲ್ಲಿ ಮಾಧವ ಆಚಾರ್ಯ ಸಹಕರಿಸಲಿದ್ದಾರೆ. ಗಂಟೆ ಎಂಟಕ್ಕೆ ರಾತ್ರಿಯ ಪೂಜೆ ಹಾಗೂ ರಾತ್ರಿ 8:15 ರಿಂದ ಬೆಂಗಳೂರಿನ ಕಾಲ ಸ್ನೇಹಿ ಹಾಗೂ ನರ್ತನ ಯೋಗ ನೃತ್ಯ ಸಂಸ್ಥೆಯ ಯೋಗೇಶ್ ಕುಮಾರ್ ಮತ್ತು ಸ್ನೇಹನಾರಾಯಣ್ ಅವರಿಂದ ರಾಮಕಥಾ ಸುಧಾ ಭರತನಾಟ್ಯ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ. ರಾತ್ರಿ ಮಹಾಅನ್ನಸಂತರ್ಪಣೆ ನೆರವೇರಲಿದೆ. ಹಣತೆ ಬೆಳಕಿನ ಅಡಿಯಲ್ಲಿ ನೆರವೇರಲಿರುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಎಲ್ಲಾ ಭಕ್ತರುಗಳು ಪಾಲ್ಗೊಳ್ಳುವಂತೆ ಕ್ಷೇತ್ರದ ಉಸ್ತುವಾರಿ ಕುಸುಮ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!