Tuesday, September 17, 2024
Tuesday, September 17, 2024

ಕುಡಿಯುವ ನೀರಿನ ಘಟಕ ಉದ್ಘಾಟನೆ

ಕುಡಿಯುವ ನೀರಿನ ಘಟಕ ಉದ್ಘಾಟನೆ

Date:

ಉಡುಪಿ, ಜ.21: ಶಂಕರನಾರಾಯಣದ ಬಸ್ ನಿಲ್ದಾಣದ ಪ್ರಯಾಣಿಕರ ತಂಗುದಾಣದಲ್ಲಿ ಬಹುದಿನಗಳ ಬೇಡಿಕೆಯ ಕುಡಿಯುವ ನೀರಿನ ಘಟಕದ ಉದ್ಘಾಟನೆ ಮತ್ತು ಹಸ್ತಾಂತರ ಕಾರ್ಯಕ್ರಮ ನಡೆಯಿತು. ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್‌ನ ರಾಷ್ಟ್ರೀಯ ನಿರ್ದೇಶಕರಾದ ಸೀನಿಯರ್ ಚಿತ್ರ ಕುಮಾರ್ ಅವರು ನೀರಿನ ಘಟಕವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಉದ್ಘಾಟನೆಯ ನಂತರ ಅದರ ನಿರ್ವಹಣೆಗಾಗಿ ಗ್ರಾಮ ಪಂಚಾಯತ್‌ಗೆ ನೀಡುವರೇ ಸಾಂಕೇತಿಕವಾಗಿ ಅದನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮೇಶ ಶೆಟ್ಟಿ ಕಲ್ಗದ್ದೆಯವರಿಗೆ ಹಸ್ತಾಂತರಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಶಂಕರನಾರಾಯಣ ಲೀಜನ್‌ನ ಸ್ಥಾಪಕಾಧ್ಯಕ್ಷರಾದ ರಾಘವೇಂದ್ರ ಶೇಟ್ ಮಾತನಾಡಿ, ಹಲವು
ವರ್ಷಗಳಿಂದಲೂ ಪ್ರಯಾಣಿಕರಿಗೆ ಇಲ್ಲಿ ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಇಲ್ಲದೇ ಇರುವುದನ್ನು ಮನಗಂಡು ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಶಂಕರನಾರಾಯಣ ಲೀಜನ್ ನ ಸರ್ವಸದಸ್ಯರ ಒಮ್ಮತದ ನಿರ್ಣಯದಂತೆ ಸುಮಾರು 35000.00 ರೂ ವೆಚ್ಚದ ಈ ಶುದ್ಧ ಕುಡಿಯುವ ನೀರಿನ ಘಟಕವನ್ನು ತಮ್ಮ ಸಂಸ್ಥೆಯ ವತಿಯಿಂದ ನೀಡಲಾಗಿದೆ ಎಂದರು. ಸೀನಿಯರ್ ಚೇಂಬರ್‌ನ ಕಾರ್ಯದರ್ಶಿ ರಾಮಚಂದ್ರ ದೇವಾಡಿಗ, ಖಜಾಂಚಿ ಎ. ಪಿ. ಶೆಟ್ಟಿ, ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಾಜೀವ ಶೆಟ್ಟಿ ಶಾಡಿಗುಂಡಿ, ಸೀನಿಯರ್ ಚೇಂಬರ್‌ನ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!