Friday, September 20, 2024
Friday, September 20, 2024

ಐತಿಹಾಸಿಕ ಕೀಳಂಜೆ ದೇವಸ್ಥಾನದಲ್ಲಿ ಮುಷ್ಟಿಕಾಣಿಕೆ ಸಮರ್ಪಣೆ ಸಂಪನ್ನ

ಐತಿಹಾಸಿಕ ಕೀಳಂಜೆ ದೇವಸ್ಥಾನದಲ್ಲಿ ಮುಷ್ಟಿಕಾಣಿಕೆ ಸಮರ್ಪಣೆ ಸಂಪನ್ನ

Date:

ಹಾವಂಜೆ, ಜ.23: ಪುರಾತನ ಪ್ರಸಿದ್ಧ 8 ನೇ ಶತಮಾನದ ಗಾಲವ ಋಷಿ ತಪಸ್ಸು ಮಾಡಿದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹರಿಹರ ತೀರ್ಥದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಹೋಮಾದಿಗಳು ಉಡುಪಿ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ ಸೋಮವಾರದಂದು ನಡೆಯಿತು. ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಭದ್ರದೀಪ ಸಮರ್ಪಣೆ, ಮುಷ್ಟಿಕಾಣಿಕೆ
ಸಮರ್ಪಣೆ ಹಾಗು ಇತರ ಧಾರ್ಮಿಕ ವಿಧಿಗಳೊಂದಿಗೆ ಪ್ರಾರಂಭಗೊಂಡಿತು. ಅಂದು ಜೈನ ಮುನಿ ಗಾಲವ ಋಷಿ ತಪಸ್ಸು ಮಾಡಿದ್ದ ಗುಹೆ ‘ದಾಸನಗುಳಿ’ ಎಂಬಲ್ಲಿ ಊರಿನ ಎಲ್ಲ ಭಕ್ತರು ಸೇರಿ ದೀಪ ಪ್ರಜ್ವಲಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು .

ಮಂಗಳವಾರದಂದು ಬೆಳಿಗ್ಗೆ ನವಕ ಪ್ರಧಾನ ಹೋಮ, ನವಗ್ರಹ ಶಾಂತಿ, ಮಧ್ಯಾಹ್ನ ಅನ್ನಸಂತರ್ಪಣೆ ಸಂಜೆ ದುರ್ಗಾನಮಸ್ಕಾರ ಪೂಜೆ ನೆರವೇರಿತು. ಜನವರಿ 31 ಬುಧವಾರ ಸರ್ಪ ಸಂಸ್ಕಾರ ಕ್ರಿಯೆಯ ಮಂಗಳ, ಆಶ್ಲೇಷ ಬಲಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದು
ದೇವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!