Thursday, September 19, 2024
Thursday, September 19, 2024

ಯಡ್ತಾಡಿಯಲ್ಲಿ ಸಂವಿಧಾನ ಜಾಗೃತಿ ಜಾಥ

ಯಡ್ತಾಡಿಯಲ್ಲಿ ಸಂವಿಧಾನ ಜಾಗೃತಿ ಜಾಥ

Date:

ಉಡುಪಿ, ಫೆ.9: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಗುರುವಾರ ಯಡ್ತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಯ್ಬ್ರಕಟ್ಟೆ ಸರ್ಕಲ್‌ನಿಂದ ಯಡ್ತಾಡಿ ಗ್ರಾಮ ಪಂಚಾಯತ್ ವರೆಗೆ ನಡೆದ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ಸ್ಥಬ್ದಚಿತ್ರ ಮೆರವಣಿಗೆಗೆ ಬೈಕ್ ರ‍್ಯಾಲಿ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಂಜುನಾಥ ಗಿಳಿಯಾರು ಮಾತನಾಡಿ, ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವದ ಕುರಿತು ಅರಿವು ಮೂಡಿಸುವ ಅಗತ್ಯತೆ ಇದೆ. ಮುಂದಿನ ಪೀಳಿಗೆಗೆ ಸಂವಿಧಾನದ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖಾ ಅಧಿಕಾರಿ ರೋಷನ್ ಕುಮಾರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳಿಗೆ ಏರ್ಪಡಿಸಿದ ಸಂವಿಧಾನ ಕುರಿತಾದ ಭಾಷಣ, ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಪಂಚಾಯತ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನೋಡಲ್ ಅಧಿಕಾರಿಯ ಪ್ರದೀಪ ಕೊಂಡೊಜೆ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ ಇಬ್ರಾಹಿಂಪುರ್, ಸಮಾಜ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕ ರೋಷನ್ ಕುಮಾರ್, ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಅಧೀಕ್ಷಕ ವಿಶ್ವನಾಥ ಶೆಟ್ಟಿ, ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಭಾಗೀರಥಿ, ಚಂದ್ರ ಯಡ್ತಾಡಿ, ಪಂಚಾಯತ್‌ನ ಎಲ್ಲಾ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಪಿ.ಡಿ..ಓ ವಿನೋದ ಕಾಮತ್ ಸ್ವಾಗತಿಸಿ, ಗ್ರಾಮ ಪಂಚಾಯತ್ ಸದಸ್ಯ ಬಾಬು ನಾಯ್ಕ್ ನಿರೂಪಿಸಿ, ಪಂಚಾಯತ್ ಸಿಬ್ಬಂದಿಯ ಕಲ್ಲಪ್ಪ ಯಡ್ತಾಡಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!