Thursday, September 19, 2024
Thursday, September 19, 2024

ಉಡುಪಿ ಶ್ರೀ ಕೃಷ್ಣ ಮಠ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ

ಉಡುಪಿ ಶ್ರೀ ಕೃಷ್ಣ ಮಠ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ

Date:

ಉಡುಪಿ, ಫೆ.10: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀ ಪುರಂದರ ದಾಸರ ಭಾವಚಿತ್ರ ಕೃತಿಗಳ ಶೋಭಾಯಾತ್ರೆ ರಥಬೀದಿಯಲ್ಲಿ ನೆರವೇರಿತು. ವಿವಿಧ ಭಜನಾ ತಂಡಗಳು, ವಾದ್ಯ ಮೇಳಗಳೊಂದಿಗೆ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಹಾಗೂ ಮಾದವ ತೀರ್ಥ ಸಂಸ್ಥಾನದ ಕಿರಿಯ ಶ್ರೀಪಾದರ ಉಪಸ್ಥಿತಿಯಲ್ಲಿ ಭವ್ಯ ಶೋಭಾ ಯಾತ್ರೆ ನಡೆಯಿತು. ನಂತರ ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀ ಪುರಂದರದಾಸರ ಕೀರ್ತನೆಗಳ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಪರ್ಯಾಯ ಶ್ರೀಪಾದದ್ವಯರು ಮತ್ತು ಮಾದವ ತೀರ್ಥ ಸಂಸ್ಥಾನದ ಕಿರಿಯ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.

ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಹಿಂದುಸ್ಥಾನಿ ಗಾಯಕ ಪ್ರದೀಪ್ ಸಪ್ತಸ್ವರ ಕುಕ್ಕುಡೆ ಮತ್ತು ಬಳಗದವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ರಾಜಾಂಗಣದಲ್ಲಿ ನಡೆಯಿತು. ದಾಸಸಾಹಿತ್ಯ ಪ್ರಾಜೆಕ್ಟ್ ಟಿ.ಟಿ.ಡಿ ಇವರ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ವಿದುಷಿ ಸಂಧ್ಯಾ ಶ್ರೀನಾಥ್ ಇವರಿಂದ ‘ದಾಸವಾಣಿ’ ಕಾರ್ಯಕ್ರಮ ಮಧ್ವ ಮಂಟಪದಲ್ಲಿ ನಡೆಯಿತು. ವಿದ್ವಾನ್ ವೆಂಕಟ ನರಸಿಂಹಾಚಾರ್ ಜೋಷಿ, ಹುಬ್ಬಳ್ಳಿ ಇವರಿಂದ ‘ಶ್ರೀ ಪುರಂದರೋಪನಿಷತ್’ ವಿಶೇಷ ಪ್ರವಚನ ರಾಜಾಂಗಣದಲ್ಲಿ ನಡೆಯಿತು.

ವಿಶೇಷ ನಂಟು: ಉಡುಪಿ ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರಿಗೂ ಶ್ರೀ ಪುರಂದರದಾಸರಿಗೂ ವಿಶೇಷ ನಂಟು. ಉಡುಪಿ ಶ್ರೀ ಕೃಷ್ಣ ಮತ್ತು ಪ್ರಾಣ ದೇವರನ್ನು ತಮ್ಮ ಅನೇಕ ಕೀರ್ತನೆಗಳಲ್ಲಿ ವರ್ಣಿಸಿ ಸ್ತುತಿಸಿರುವ ಪುರಂದರದಾಸರು ಇಲ್ಲಿನ ಚಂದ್ರೇಶ್ವರ ಅನಂತೇಶ್ವರ ಮತ್ತು ಮಧ್ವ ಸರೋವರವನ್ನು ವರ್ಣಿಸಿದ್ದಾರೆ. ಶ್ರೀ ಪುರಂದರದಾಸರ ಆರಾಧನೆ ಪ್ರಯುಕ್ತ ಪರ್ಯಾಯ ಮಠದಿಂದ ಶತಕಂಠ ಗಾಯನ ಆಯೋಜಿತಗೊಂಡಿತ್ತು. ಸುಗುಣ ಶ್ರೀ ಭಜನಾ ಮಂಡಳಿಯ ಸುಮಾರು 600 ಸ್ತ್ರೀಯರು ಶಾಂತ ಹೆಬ್ಬಾರ್ ಅವರ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ಶ್ರೀ ಪುರಂದರ ದಾಸರ ಕೀರ್ತನೆಗಳನ್ನು ಹಾಡಿದರು. ಶ್ರೀ ವಾದಿರಾಜತೀರ್ಥರೊಂದಿಗೆ ರಾಜಾಂಗಣದಲ್ಲಿ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣರ ಸಂಕೀರ್ತನೆಯಲ್ಲಿ ತೊಡಗಿದ್ದ ಘಟನೆಯನ್ನು ಸ್ಮರಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!