Saturday, June 13, 2026
Saturday, June 13, 2026

ಆಸರೆ ಚಾರಿಟೇಬಲ್ ಟ್ರಸ್ಟ್- 101ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ

ಆಸರೆ ಚಾರಿಟೇಬಲ್ ಟ್ರಸ್ಟ್- 101ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ

Date:

ಉಡುಪಿ: ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸೇವಾ ಪ್ರಕಲ್ಪವಾದ ಆಸರೆ ಚಾರಿಟೇಬಲ್ ಟ್ರಸ್ಟ್(ರಿ) ಕಡಿಯಾಳಿ ಇವರ ವತಿಯಿಂದ 101 ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ, 2022 ರೊಳಗೆ ಇಡೀ ಉಡುಪಿ ನಗರದ ಎಲ್ಲಾ ಬಡವರ ಮನೆಗೆ ಉಚಿತ ವಿದ್ಯುತ್ ನೀಡುವುದರ ಮುಖೇನ 100 ಶೇಕಡ ವಿದ್ಯುತ್ ಹೊಂದಿದ ದೇಶದ ಮೊತ್ತ ಮೊದಲ ನಗರವನ್ನಾಗಿಸುವ ಪ್ರಯತ್ನ ಯಶಸ್ಸಿನತ್ತ ಸಾಗುತ್ತಿದೆ ಎಂದರು. ವಿದ್ಯುತ್ ಸಂಪರ್ಕವಿಲ್ಲದ ಉಡುಪಿ ನಗರದ ಮನೆಗಳಿದ್ದಲ್ಲಿ ಕೂಡಲೇ ಸಾರ್ವಜನಿಕರು ಸಂಪರ್ಕಿಸಿ ಸಹಕರಿಸುವಂತೆ ವಿನಂತಿಸಿದರು.

ಗೋಪಾಲಪುರ ವಾರ್ಡಿನ ಗಿರಿಜಾ ಆಚಾರ್ತಿ ಮನೆಗೆ ಉಚಿತ ವಿದ್ಯುತ್ ಸಂಪರ್ಕ ನೀಡಿದ ದಾನಿಗಳಾದ ಎನ್. ವಿಶ್ವನಾಥ ಕಾಮತ್ ರವರು ಸ್ವಿಚ್ ಆನ್ ಮಾಡಿ ಉದ್ಘಾಟಿಸಿದರು. ಆಸರೆ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಪ. ವಸಂತ ಭಟ್ ಅಧ್ಯಕ್ಷತೆ ವಹಿಸಿದ್ದರು.

ಗಣೇಶೋತ್ಸವ ಸಮಿತಿ ಸದಸ್ಯರಾದ ರಾಕೇಶ್ ಜೋಗಿ, ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಮಡಿ ಮಲ್ಲಿಕಾರ್ಜುನ ದೇವಸ್ಥಾನದ ಅಧ್ಯಕ್ಷರಾದ ಗಣೇಶ್ ಕೋಟ್ಯಾನ್, ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಉಮೇಶ್ ಶೆಟ್ಟಿ, ಚಿನ್ಮಯಮೂರ್ತಿ, ಯಾದವ ನಯಂಪಳ್ಳಿ, ದಿನಕರ್ ನಯಂಪಳ್ಳಿ, ಅಮಿತ್ ಪೂಜಾರಿ, ಉದಯ ನಯಂಪಳ್ಳಿ, ಪ್ರತಾಪ್ ಪೂಜಾರಿ, ನವೀನ ನಾಯಕ, ಶ್ಯಾಮರಾಯ ಆಚಾರ್ಯ, ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!