Home ಸುದ್ಧಿಗಳು ಪ್ರಾದೇಶಿಕ ಪೆರ್ಡೂರು ಗ್ರಾಮ ಪಂಚಾಯತ್‌ನಲ್ಲಿ ಸಂವಿಧಾನ ಜಾಗೃತಿ ಜಾಥ

ಪೆರ್ಡೂರು ಗ್ರಾಮ ಪಂಚಾಯತ್‌ನಲ್ಲಿ ಸಂವಿಧಾನ ಜಾಗೃತಿ ಜಾಥ

201
0

ಉಡುಪಿ, ಫೆ.12: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಸಂವಿಧಾನ ದಿನಾಚರಣೆ ಪ್ರಯುಕ್ತ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರವಿವಾರ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ನೆರವೇರಿತು. ಈ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವು ಪೆರ್ಡೂರು ಪ್ರೌಢಶಾಲೆಯಿಂದ ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್, ಬೈಕ್ ರ‍್ಯಾಲಿ ಮತ್ತು ಚಂಡೆವಾದನದೊಂದಿಗೆ ಆಗಮಿಸಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷೆ ಚೇತನಾ ಶೆಟ್ಟಿ ಹಾಗೂ ಸದಸ್ಯರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗಣನಾಥ ಎಕ್ಕಾರು ಮಾತನಾಡಿ, ಸಂವಿಧಾನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಕಛೇರಿ ಅಧಿಕ್ಷಕಿ ವಿಜಯಲಕ್ಷ್ಮೀ ದಿನ್ನಿ ರವರು ಭಾರತ ಸಂವಿದಾನದ ಪ್ರಸ್ತಾವನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಅಂಬೇಡ್ಕರ್, ಗಾಂಧೀಜಿ, ಭಾರತಮಾತೆ ಮತ್ತು ಯಕ್ಷಗಾನ ಛಧ್ಮವೇಷವು ಕಾರ್ಯಕ್ರಮಕ್ಕೆ ಮೆರಗು ನೀಡಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಏರ್ಪಡಿಸಿದ ಸಂವಿಧಾನ ಕುರಿತಾದ ಭಾಷಣ, ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಉಪಾಧ್ಯಕ್ಷ ದೇವು ಪೂಜಾರಿ ಪಿ.ಡಿ.ಓ ಸುಮನಾ ಕೆ., ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು, ವಿವಿಧ ಸಂಘಟನೆಗಳ ಸದಸ್ಯರುಗಳು, ಸಂಘ ಸಂಸ್ಥೆಯವರು, ಗ್ರಾಮಲೆಕ್ಕಿಗ ಗುರುಪ್ರಸಾದ್, ಸಂಘಟನಾಕಾರರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ವ್ಯಾಪ್ತಿಯ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ವಿದ್ಯಾರ್ಥಿ ವೃಂದ, ಸಂಜೀವಿನಿ ಸಂಘದ ಸದಸ್ಯರು, ಎಸ್.ಎಲ್.ಆರ್.ಎಮ್ ಸಂಘದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಪಿ.ಡಿ.ಓ ಸುಮನಾ.ಕೆ ಸ್ವಾಗತಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.