Home ಸುದ್ಧಿಗಳು ಪ್ರಾದೇಶಿಕ ಕುಕ್ಕುಂದೂರು: ಸಂವಿಧಾನ ಜಾಗೃತಿ

ಕುಕ್ಕುಂದೂರು: ಸಂವಿಧಾನ ಜಾಗೃತಿ

160
0

ಉಡುಪಿ, ಫೆ.14: ಜಿಲ್ಲಾಡಳಿತ ಜಿಲ್ಲಾಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬುಧವಾರ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ನಡೆಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಯಂತಿನಗರ, ಸರಕಾರಿ ಫ್ರೌಢಶಾಲೆ ನಕ್ರೆ, ಕುಕ್ಕುಂದೂರು, ಮತ್ತು ಕೆಎಂಇಎಸ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಪಥ ಸಂಚಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಂಘಟನಾ ಸಂಚಾಲಕ ಅಣ್ಣಪ್ಪ ನಕ್ರೆ ಸಂವಿಧಾನದ ಜಾಗೃತಿ ಜಾಥದ ಕುರಿತು ಮಾತನಾಡಿದರು. ಸಮಾಜಕಲ್ಯಾಣ ಇಲಾಖಾ ಸಿಬ್ಬಂದಿ ಜಯಂತಿ ಜೆ. ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಸಂವಿಧಾನ ಕುರಿತು ಏರ್ಪಡಿಸಲಾದ ಭಾಷಣ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ ಬಿ.ವಿ., ಕಾರ್ಕಳ ಪಂಚಾಯತ್ ಅಧ್ಯಕ್ಷೆ ಉಷಾ ಕೆ. ಕಂದಾಯ ಇಲಾಖೆ ಉಪ ತಹಶೀಲ್ದಾರ ಮಂಜುನಾಥ ನಾಯಕ್ ಕಾರ್ಕಳ ಪಂಚಾಯತ್ ಉಪಾಧ್ಯಕ್ಷ, ಗ್ರಾಮ ಪಂಚಾಯತ್ ಸದಸ್ಯರು, ಹಾಗೂ ಸಿಬ್ಬಂದಿ ವರ್ಗದವರು, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತೆಯವರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಕುಕ್ಕುಂದೂರು ಗ್ರಾಮ ಕಾರ್ಯದರ್ಶಿ ನಿರ್ಮಲ ಸ್ವಾಗತಿಸಿ, ನಿರೂಪಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ವಂದನೆಗೈದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.