Sunday, October 27, 2024
Sunday, October 27, 2024

ಕೃತಕ ಬುದ್ಧಿಮತ್ತೆಯು ಅಂತಿಮವಾಗಿ ಮಾನವನ ಬುದ್ಧಿವಂತಿಕೆಯ ಮೇಲೆ ಅವಲಂಬಿತವಾಗಿರುತ್ತದೆ: ಪ್ರೊ.ಕೆ.ಪಿ.ರಾವ್

ಕೃತಕ ಬುದ್ಧಿಮತ್ತೆಯು ಅಂತಿಮವಾಗಿ ಮಾನವನ ಬುದ್ಧಿವಂತಿಕೆಯ ಮೇಲೆ ಅವಲಂಬಿತವಾಗಿರುತ್ತದೆ: ಪ್ರೊ.ಕೆ.ಪಿ.ರಾವ್

Date:

ಮಣಿಪಾಲ, ಫೆ.15: ಕೃತಕ ಬುದ್ಧಿಮತ್ತೆಯನ್ನು ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಬಳಸಿದರೆ ಹಲವು ಸಾಧ್ಯತೆಗಳನ್ನು ಸಾಧಿಸಬಹುದಾಗಿದೆ ಎಂದು ಗಣಕ ಭಾಷಾಶಾಸ್ತ್ರಜ್ಞ ಮತ್ತು ವಿದ್ವಾಂಸ ಪ್ರೊ.ಕೆ.ಪಿ.ರಾವ್ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಆಶ್ರಯದಲ್ಲಿ ನಡೆದ ಡಿಕೋಡಿಂಗ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವಿಷಯದ ಕುರಿತು ಮಾತನಾಡಿದ ಅವರು ಸಂಗೀತ, ಕಥನ ಕಲೆ, ವೀಡಿಯೊ ಎಡಿಟಿಂಗ್ ಮತ್ತು ಮಾಧ್ಯಮದಂತಹ ಸೃಜನಶೀಲ ಕ್ಷೇತ್ರಗಳಲ್ಲಿ ‘ಎಐ’ನಿಂದ ಬಹು ಉಪಯೋಗಗಳನ್ನು ಹೊಂದಬಹುದು ಎಂದು ಹೇಳಿದರು. ಆದಾಗಿಯೂ, ಕೃತಕ ಬುದ್ಧಿಮತ್ತೆಯು ಅಂತಿಮವಾಗಿ ಮಾನವನ ಬುದ್ಧಿವಂತಿಕೆಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಅವರು ಹೇಳಿದರು. ತಾಂತ್ರಿಕ ಪ್ರಗತಿಯನ್ನು ನಿಲ್ಲಿಸಲು ಸಾಧ್ಯವಿಲ್ಲ, ಆದ್ದರಿಂದ ನಾವು ಎಚ್ಚರಿಕೆಯಿಂದ ಅದನ್ನು ಉಪಯೋಗಿಸಬೇಕು. ಇದನ್ನು ಮಾನವ ಕಲ್ಯಾಣಕ್ಕಾಗಿ, ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ನಾವು ನೋಡಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಅವರು ದತ್ತಾಂಶ, ಮಾಹಿತಿ ಮತ್ತು ಕೃತಕ ಬುದ್ಧಿಮತ್ತೆಯ ಜ್ಞಾನವನ್ನು ನಿಭಾಯಿಸಲು ಅಗತ್ಯವಾದ ಬುದ್ಧಿವಂತಿಕೆಯ ಕುರಿತು ಮಾತನಾಡಿದರು. ತನಿಷ್ಕಾ ಕೋಟ್ಯಾನ್ ಸಂವಾದವನ್ನು ನಿರ್ವಹಿಸಿದರು. ಡಾ.ರೇಸ್ಮಿ ಭಾಸ್ಕರನ್, ಥಾಮಸ್, ಡಾ.ಜನಾರ್ದನ್ ಹಾವಂಜೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (ಅ.26) ಚಿನ್ನದ ದರ

GOLD 22KT- 7,360 8 GRAMS- 58,880

ಕೆ.ಎಂ.ಸಿ. ಮಣಿಪಾಲ: ಜಾಗೃತಿ ನಡಿಗೆ

ಮಣಿಪಾಲ, ಅ.26: ಪ್ರತಿವರ್ಷ ಅಕ್ಟೋಬರ್‌ನ ಎರಡನೇ ಶನಿವಾರದಂದು, ಉಪಶಾಮಕ ಆರೈಕೆ ಅಗತ್ಯಗಳೊಂದಿಗೆ...

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶ

ಕೋಟ, ಅ.26: ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ,...

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...
error: Content is protected !!