Saturday, August 29, 2026
Saturday, August 29, 2026

ಪರಿಸರ ಜಾಗೃತಿ ಮಾಹಿತಿ ಕಾರ್ಯಾಗಾರ

ಪರಿಸರ ಜಾಗೃತಿ ಮಾಹಿತಿ ಕಾರ್ಯಾಗಾರ

Date:

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟತಟ್ಟು ಪಡುಕರೆ ಇದರ ಇಕೋ ಕ್ಲಬ್ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಾಗಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಕೆ. ರಾಜಾರಾಮ್ ಐತಾಳ್ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿ ಪರಿಸರ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲ ಆದ್ಯ ಕರ್ತವ್ಯ, ಈ ನಿಟ್ಟಿನಲ್ಲಿ ಪರಿಸರಕ್ಕೆ ಹಾನಿಕರವಾದ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯಗಳನ್ನು ಎಸೆಯುವ ಕೈಗಳಿಗೆ ಕಡಿವಾಣ ಹಾಕಬೇಕಾದ ಅಗತ್ಯತೆಯನ್ನು ಮನವರಿಕೆಮಾಡಿಕೊಟ್ಟರು.

ವಿದ್ಯಾರ್ಥಿಗಳು ಮನೆಯ ಹಿತ್ತಲಲ್ಲಿ ಗಿಡನೆಟ್ಟು ಪೋಷಿಸುವ ಕೆಲಸ ನಿರಂತವಾಗಿ ಮಾಡಬೇಕು ಆ ಮೂಲಕ ಪ್ರಾಕೃತಿಕ ಸಮತೋಲನ ಸೃಷ್ಠಿಸಲು ಸಾಧ್ಯವಾಗುತ್ತದೆ. ಪ್ರಸ್ತುತ ಕಾಲಘಟ್ಟದಲ್ಲಿ ಆಗುತ್ತಿರುವ ಪ್ರಾಕೃತಿಕ ಅಸಮತೋಲನ ಬಗ್ಗೆ ತಿಳಿಹೇಳಿದರಲ್ಲದೆ, ಪರಿಸರಿಂದ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಮಾಡುವ ಕಾಯಕಕ್ಕೆ ಕೈಜೋಡಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಜಾನಕಿ ವಹಿಸಿದ್ದರು.

ಗೌರವ ಶಿಕ್ಷಕಿಯರಾದ ಶೈಲಜಾ, ಪ್ರಣೀತಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲೆಯ ಇಕೋ ಕ್ಲಬ್ ನೋಡಲ್ ಅಧಿಕಾರಿ ಶಿಕ್ಷಕ ಗಣೇಶ್ ಆಚಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಸಂಗೀತ ಸ್ವಾಗತಿಸಿ, ಲಕ್ಷ್ಮಣ ಸುವರ್ಣ ವಂದಿಸಿದರು. ಶಿಕ್ಷಕ ಅರವಿಂದ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!