Tuesday, February 25, 2025
Tuesday, February 25, 2025

ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸ.ಪ್ರ.ದ.ಕಾಲೇಜು: ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ

ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸ.ಪ್ರ.ದ.ಕಾಲೇಜು: ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ

Date:

ಬ್ರಹ್ಮಾವರ, ಫೆ.18: ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಶನಿವಾರ ನಡೆಯಿತು. ಪ್ರಾಂಶುಪಾಲರಾದ ಡಾ. ರಮೇಶ್ ಆಚಾರ್ ಅವರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ‘ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ನಾದ ಹಿನ್ನೆಲೆಯ ಬಗ್ಗೆ ವಿಸ್ತ್ರತವಾಗಿ ಮಾತನಾಡಿದರು. ಇಡೀ ಜಗತ್ತಿಗೆ ಜ್ಯೋತಿ ಸ್ವರೂಪರಾಗಿರುವ ಬಸವಣ್ಣನವರು, ಸಮಾಜದ ಅಂಕುಡೊಂಕುಗಳನ್ನು ತಮ್ಮ ವಚನಗಳ ಮೂಲಕ ತಿದ್ದಿದ್ದಾರೆ. ಜಾತಿ ಎಂಬ ಸಂಕೋಲೆಯಿಂದ ಜನರನ್ನು ಹೊರತರಲು ಅವರು ಮಾಡಿದ ಕಾರ್ಯ ಇಂದಿಗೂ ಮಾದರಿಯಾಗಿದೆ. ಸಮಾಜದ ಎಲ್ಲಾ ಸಮಸ್ಯೆಗಳಿಗೂ ಬಸವಣ್ಣನವರ ವಚನಗಳಲ್ಲಿ ಪರಿಹಾರವಿದೆ. 12ನೇ ಶತಮಾನದಲ್ಲಿ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯ ಸ್ಪಷ್ಟ ಕಲ್ಪನೆಯನ್ನು ಮಾಡಿದುದು ಅವರ ದೂರದೃಷ್ಟಿಗೆ ಹಿಡಿದ ಕನ್ನಡಿಯಾಗಿದೆ ಎಂದರು.

ವಾಣಿಜ್ಯಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ರಾಧಾಕೃಷ್ಣ ನಾಯಕ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!