Saturday, September 21, 2024
Saturday, September 21, 2024

ಕಟ್ಟಡ ಮಾಲೀಕರು ಸುಂಕ ಪಾವತಿಸುವ ಕುರಿತು

ಕಟ್ಟಡ ಮಾಲೀಕರು ಸುಂಕ ಪಾವತಿಸುವ ಕುರಿತು

Date:

ಉಡುಪಿ, ಫೆ.21: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ 1996 ಮತ್ತು ಕರ್ನಾಟಕ ನಿಯಮಗಳು 2006 ರಡಿ 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಲ್ಲಿ ಕಡ್ಡಾಯವಾಗಿ ಕಟ್ಟಡ ಮಾಲೀಕರು, ನಿಯೋಜಕರು ಹಾಗೂ ಗುತ್ತಿಗೆದಾರರು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಸಂಸ್ಥೆಯನ್ನಾಗಿ ನೋಂದಾಯಿಸಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನಿಗಧಿತ ಶುಲ್ಕವನ್ನು ಭರಿಸಿ, ನೋಂದಣಿ ಪ್ರಮಾಣ ಪತ್ರವನ್ನು ಕಾರ್ಮಿಕ ಇಲಾಖೆಯಿಂದ ಪಡೆಯುವುದು ಕಡ್ಡಾಯವಾಗಿರುತ್ತದೆ.

ವ್ಯಾಸ್ತವ್ಯದ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ರೂ.10 ಲಕ್ಷ ನಿರ್ಮಾಣ ವೆಚ್ಚ ಮೀರಿದ ಕಟ್ಟಡ ಮತ್ತು ಯಾವುದೇ ವಾಣಿಜ್ಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳುವ ಕಟ್ಟಡದ ಮಾಲೀಕರು ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡ ಬಳಿಕ ಸ್ಥಳೀಯ ಸಂಸ್ಥೆಯ ಪರವಾನಗಿ ಪ್ರಾಧಿಕಾರ ಕಛೇರಿಗಳಿಂದ ಆಕ್ಯುಪೆನ್ಸಿ ಸರ್ಟಿಫಿಕೇಟ್ ಅನ್ನು ಕಟ್ಟಡದ ನಿರ್ಮಾಣ ಮಾಲೀಕರು ಪಡೆಯುವ ಪೂರ್ವದಲ್ಲಿ ಕಾರ್ಮಿಕ ಅಧಿಕಾರಿ ಹಾಗೂ ಸುಂಕ ಮೌಲ್ಯಮಾಪನಾಧಿಕಾರಿಗಳಿಗೆ ಕಟ್ಟಡದ ಮಾಲೀಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಸುಂಕ ಕಾಯ್ದೆಯನ್ವಯ ನಮೂನೆ-1 ಹಾಗೂ ನಮೂನೆ-4 ರಲ್ಲಿ ಭರ್ತಿ ಮಾಡಿದ ಮಾಹಿತಿ ಹಾಗೂ ಅಗತ್ಯ ದಾಖಲಾತಿಯನ್ನು ಸಲ್ಲಿಸಿ, ಸುಂಕ ಮೌಲ್ಯಮಾಪನ ಆದೇಶ ಮಾಡಿಸಿಕೊಂಡು ಸುಂಕದ ಪೂರ್ಣ ಮೊತ್ತ ಪಾವತಿ ಮಾಡಿರುವ ಬಗ್ಗೆ ದೃಢಪತ್ರವನ್ನು ಪಡೆದು ಸ್ಥಳೀಯ ಸಂಸ್ಥೆಯ ಪರವಾನಗಿ ಪ್ರಾಧಿಕಾರ ಕಛೇರಿಗಳಿಂದ ಆಕ್ಯುಪೆನ್ಸಿ ಸರ್ಟಿಫಿಕೇಟ್ ಅನ್ನು ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!