Sunday, September 22, 2024
Sunday, September 22, 2024

ಸಮೃದ್ಧಿ ಯುವಕ ಮಂಡಲ: ಗ್ರಾಮೀಣ ಕ್ರೀಡಾಕೂಟ

ಸಮೃದ್ಧಿ ಯುವಕ ಮಂಡಲ: ಗ್ರಾಮೀಣ ಕ್ರೀಡಾಕೂಟ

Date:

ಉಡುಪಿ, ಫೆ.22: ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಮತ್ತು ಸಮೃದ್ಧಿ ಯುವಕ ಮಂಡಲ(ರಿ) ಕುಳ್ಳುಂಜೆ ಶಂಕರನಾರಾಯಣ ಇವರ ಸಹಯೋಗದೊಂದಿಗೆ ಗ್ರಾಮೀಣ ಕ್ರೀಡಾಕೂಟವು ಸಮೃದ್ಧಿ ಯುವಕ ಮಂಡಲದ ವಠಾರದಲ್ಲಿ ನಡೆಯಿತು. ಸಮೃದ್ಧಿ ಯುವಕ ಮಂಡಲದ ಅಧ್ಯಕ್ಷರಾದ ಗಣೇಶ ತಲ್ಲಂಜೆ ಅಧ್ಯಕ್ಷತೆ ವಹಿಸಿದ್ದರು. ಶಂಕರನಾರಾಯಣ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾದ ವತ್ಸಲಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುತ್ತಾ, ಸಮೃದ್ಧಿ ಯುವಕ ಮಂಡಲ ಗ್ರಾಮೀಣ ಕ್ರೀಡಾಕೂಟದ ಮೂಲಕ ಗ್ರಾಮೀಣ ಭಾಗದ ಜನರನ್ನು ಒಗ್ಗೂಡಿಸಿ ಸಂಭ್ರಮಿಸುವುದು ಹೆಮ್ಮೆಯ ವಿಚಾರವಾಗಿದೆ. ಈಗಿನ ಒತ್ತಡದ ಜೀವನಕ್ಕೆ ಇಂತಹ ಕಾರ್ಯಕ್ರಮಗಳು ಅನಿವಾರ್ಯವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಕುಂದಾಪುರ ವಿ.ಕೆ.ಆರ್ ಆಚಾರ್ಯ ಆಂಗ್ಲಮಾದ್ಯಮ ಶಾಲೆಯ ಶಿಕ್ಷಕ ಕೆ. ಪರಮೇಶ್ವರ ಉಡುಪ ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ವಾಲಿಬಾಲ್, ಹಗ್ಗಜಗ್ಗಾಟ, ತ್ರೋಬಾಲ್, ಓಟ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಚಂದ್ರಹಾಸ ಹೆಗ್ಡೆ ಚಂದನವನ ಬಾಡ್ಗಿರಜೆಡ್ಡು, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಘುರಾಮ ಕುಳ್ಳಂಜೆ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಕಾರ್ಯದರ್ಶಿ ನಿತಿನ್ ಕುಮಾರ್ ಬಾಳೆಕೊಡ್ಲು ಸ್ವಾಗತಿಸಿ, ನಾರಾಯಣ ಟಿ. ವಂದಿಸಿದರು.ರಾಘವೇಂದ್ರ ಶೆಟ್ಟಿ ಹೆಬ್ಬಾಡಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!