Sunday, September 22, 2024
Sunday, September 22, 2024

ಸಾಲಿಗ್ರಾಮ: ನಿಸರ್ಗದ ಮಡಿಲಲ್ಲಿ ವಿಶಿಷ್ಟ ರೀತಿಯಲ್ಲಿ ಸಂವಿಧಾನ ಜಾಗೃತಿ

ಸಾಲಿಗ್ರಾಮ: ನಿಸರ್ಗದ ಮಡಿಲಲ್ಲಿ ವಿಶಿಷ್ಟ ರೀತಿಯಲ್ಲಿ ಸಂವಿಧಾನ ಜಾಗೃತಿ

Date:

ಬ್ರಹ್ಮಾವರ, ಫೆ.23: ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ಸಾಲಿಗ್ರಾಮ ಕಾಯಾಕಿಂಗ್ ಪಾಯಿಂಟ್ ನಲ್ಲಿ ಸಂವಿಧಾನ ಜಾಗೃತಿಯ ಅಂಗವಾಗಿ ವಿನೂತನವಾಗಿ ಪ್ರವಾಸಿ ಬೋಟನ್ನು ಸಂವಿಧಾನ ಜಾಗೃತಿ ಪಥವನ್ನಾಗಿ ವಿನ್ಯಾಸಗೊಳಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂವಿಧಾನ ಜಾಗೃತಿ ಪಥಕ್ಕೆ ಚಾಲನೆ ನೀಡಲಾಯಿತು. ಸೀತಾ ನದಿಯಲ್ಲಿ ಕಾಯಾಕಿಂಗ್ ಮೂಲಕ ತೆರಳಿ ಮ್ಯಾಂಗ್ರೋ ಕಾಡುಗಳ ಮಧ್ಯೆ ನೀರಿನಲ್ಲಿ ಕಾಯಕಿಂಗ್ ದೋಣಿಗಳನ್ನು ಬಳಸಿ 75 ಎಂದು ಬರೆಯಲಾಯಿತು. ಸಾಲಿಗ್ರಾಮ ಕಯಾಕಿಂಗ್ ಪಾಯಿಂಟ್ ವಿನೂತನ ಪ್ರಯೋಗಗಳ ಮೂಲಕ ಜನಜಾಗ್ರತಿ ಮೂಡಿಸುವ ಕೆಲಸ ಮಾಡುತ್ತಿರುವುದು ಇದೇ ಮೊದಲೆನಲ್ಲ. ಇದಕ್ಕೂ ಮೊದಲು ಮತದಾನ ಜಾಗ್ರತಿ, ಪ್ಲಾಸ್ಟಿಕ್ ಜಾಗ್ರತಿ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳನ್ನು ನವ ನವೀನ ಮಾದರಿಯ ಪ್ರಯೋಗಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತಲೇ ಬಂದಿದೆ. ಇದೀಗ ಸಂವಿಧಾನ ಜಾಗ್ರತಿ ಕಾರ್ಯಕ್ರಮವನ್ನು ಪ್ರಕೃತಿ ಮಡಿಲಲ್ಲಿ ಮಾಡಿದೆ.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಸಿಇಓ ಪ್ರತೀಕ್ ಬಾಯಲ್, ಕುಂದಾಪುರ ಸಹಾಯಕ ಆಯುಕ್ತರಾದ ರಶ್ಮಿ ಎಸ್ ಆರ್., ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕಿ ಅನಿತಾ ಮಡ್ಲೂರು, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಪ್ರಿಯಂವದ, ಬ್ರಹ್ಮಾವರ ತಹಸಿಲ್ದಾರ್ ಶ್ರೀಕಾಂತ್ ಹೆಗ್ಡೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶಿವ ನಾಯ್ಕ, ಸಾಲಿಗ್ರಾಮ, ಕಯಾಕಿಂಗ್ ಪಾಯಿಂಟ್ ಮುಖ್ಯಸ್ಥ ಮಿಥುನ್ ಕುಮಾರ್ ಮೆಂಡನ್, ಲೋಕೇಶ್, ವಿನಯ್ ಮೊದಲಾದವರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...
error: Content is protected !!