Friday, September 20, 2024
Friday, September 20, 2024

ಪರಿಸರ ಅರ್ಥಶಾಸ್ತ್ರದತ್ತ ಗಮನಹರಿಸಬೇಕಾಗಿದೆ: ಡಾ. ರೇಸ್ಮಿ ಭಾಸ್ಕರನ್

ಪರಿಸರ ಅರ್ಥಶಾಸ್ತ್ರದತ್ತ ಗಮನಹರಿಸಬೇಕಾಗಿದೆ: ಡಾ. ರೇಸ್ಮಿ ಭಾಸ್ಕರನ್

Date:

ಮಣಿಪಾಲ, ಫೆ.26: ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಮತ್ತು ನೈಸರ್ಗಿಕ ಸಂಪನ್ಮೂಲಗಳು ನಶಿಸುತ್ತಿರುವ ಈ ಸಂದರ್ಭದಲ್ಲಿ ನಾವು ಪರಿಸರ ಅರ್ಥಶಾಸ್ತ್ರದತ್ತ (ಇಕೊಲೊಜಿಕಲ್ ಎಕನಾಮಿಕ್ಸ್) ಗಮನ ಹರಿಸದಿದ್ದರೆ, ಜಗತ್ತು ವಿನಾಶದ ಅಂಚಿಗೆ ತಲುಪುತ್ತದೆ ಎಂದು ಹಿರಿಯ ಅರ್ಥಶಾಸ್ತ್ರಜ್ಞೆ ಡಾ. ರೇಸ್ಮಿ ಭಾಸ್ಕರನ್ ಅಭಿಪ್ರಾಯಪಟ್ಟರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ (ಜಿಸಿಪಿಎಎಸ್), ಆಶ್ರಯದಲ್ಲಿ ‘ಪರಿಸರ ಅರ್ಥಶಾಸ್ತ್ರದ ಪ್ರಸ್ತುತತೆ’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಸಾಂಪ್ರದಾಯಿಕ ಅರ್ಥಶಾಸ್ತ್ರವು ಯಾವುದೇ ಮಿತಿಯನ್ನು ಹೊಂದಿಲ್ಲ. ನಮ್ಮ ಅಗತ್ಯತೆಗಳಿಗೂ ಮೀರಿ ಜಗತ್ತಿನಲ್ಲಿ ಸೀಮಿತ ಸಂಪನ್ಮೂಲಗಳಿವೆ. ಆರ್ಥಿಕತೆಯು ಅಭಿವೃದ್ಧಿಗೊಂಡಾಗ, ಅದು ನೈಸರ್ಗಿಕ ಸಂಪನ್ಮೂಲಗಳ ಮೇಲೆ ಹೆಚ್ಚುವರಿ ಹೊರೆಯನ್ನು ಹೇರುತ್ತದೆ, ಇದು ಭೂಮಿಯನ್ನು ವಿಪತ್ತಿನಂಚಿಗೆ ಕೊಂಡೊಯ್ಯುತ್ತದೆ ಎಂದರು.

ಜಗತ್ತಿನಲ್ಲಿ ದೇಶಗಳ ಮತ್ತು ವ್ಯಕ್ತಿಗಳ ನಡುವೆ ಸಂಪತ್ತಿನ ಸಮಾನ ಹಂಚಿಕೆ ಆಗಿಲ್ಲ. ಸಣ್ಣ ಪ್ರಭಾವಿ ಜನಸಂಖ್ಯೆ ಜಗತ್ತಿನಲ್ಲಿ ಸಂನ್ಮೂಲಗಳ ಪ್ರಮುಖ ಪಾಲನ್ನು ನಿಯಂತ್ರಿಸುತ್ತಾರೆ. ದೇಶ-ದೇಶಗಳು ಶಸ್ತ್ರಾಸ್ತ್ರ ಸ್ಪರ್ಧೆಯಲ್ಲಿ ತೊಡಗಿರುವಾಗ, ಅಗತ್ಯವಿರುವವರ ಮೂಲಭೂತ ಅಗತ್ಯಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಜಾಗತೀಕರಣವು ಮತ್ತೊಂದು ರೀತಿಯ ವಸಾಹತುಶಾಹಿಗೆ ದಾರಿ ಮಾಡಿಕೊಟ್ಟಿದೆ ಎಂದರು. ಪರಿಸರ ತಜ್ಞ ಡಾ.ಶ್ರೀಕುಮಾರ್ ಮಾತನಾಡಿ, ಭೂಮಿಯ ಸಂಪನ್ಮೂಲಗಳನ್ನು ಕಬಳಿಸುವ ಸಮಾನತೆಯನ್ನು ಪರಿಗಣಿಸದ ಬೆಳವಣಿಗೆಯತ್ತ ಗಮನಹರಿಸುವುದರಿಂದ ಅಭಿವೃದ್ಧಿಯ ಕಲ್ಪನೆಯೇ ನಮ್ಮ್ ಸಮಸ್ಯೆಯ ಮೂಲವಾಗಿದೆ ಎಂದು ಅಭಿಪ್ರಾಯಪಟ್ಟರು. ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಮಾತನಾಡಿ, ಇಂದು ಪರಿಸರ ಅರ್ಥಶಾಸ್ತ್ರವು ನಮ್ಮ ಅಸ್ತಿತ್ವದೊಂದಿಗೆ ಸಂಪರ್ಕ ಕಲ್ಪಿಸುವ ಸಂಶೋಧನೆಯ ಪ್ರಮುಖ ಕ್ಷೇತ್ರವಾಗಿದೆ ಎಂದರು. ತನಿಷ್ಕಾ ಕೋಟ್ಯಾನ್ ಕಾರ್ಯಕ್ರಮ ನಿರೂಸಿದರು. ಡಾ. ರವೀಂದ್ರನಾಥನ್, ಡಾ. ಐಡಾ ಡಿಸೋಜಾ ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!