Saturday, October 26, 2024
Saturday, October 26, 2024

ಪ್ರತಿಭಟಿಸುವ ಭರದಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯವಾದುದು: ರಮೇಶ್ ಕಾಂಚನ್

ಪ್ರತಿಭಟಿಸುವ ಭರದಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯವಾದುದು: ರಮೇಶ್ ಕಾಂಚನ್

Date:

ಉಡುಪಿ, ಮಾ.7: ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ರಾಜಕೀಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲು ಬಾಕಿ ಇದ್ದು ಅವರು ತನ್ನ ಮಕ್ಕಳಾಟಿಕೆ ಸ್ವಭಾವವನ್ನು ಕೈಬಿಟ್ಟು ಉಡುಪಿ ಕ್ಷೇತ್ರದ ಜನರು ತನಗೆ ಮತ ನೀಡಿರುವುದು ಕ್ಷೇತ್ರದ ಅಭಿವೃದ್ಧಿ ಮಾಡಲು ಎನ್ನುವುದುನ್ನು ಅರಿತು ಅದರ ಕಡೆಗೆ ಗಮನ ಹರಿಸುವುದು ಉತ್ತಮ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ‌ಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಸಲಹೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಪ್ರತಿಯೊಬ್ಬರಿಗೂ ಅವಕಾಶವಿದೆ ಆದರೆ ಪ್ರತಿಭಟನೆಯ ಹೆಸರಿನಲ್ಲಿ ಪ್ರಚೋದನೆಗೆ ಅವಕಾಶ ನೀಡುವುದು ತಪ್ಪು. ಹಿರಿಯ ಸಾಮಾಜಿಕ ಕಾರ್ಯಕರ್ತರಾದ ಎಂ.ಜಿ ಹೆಗ್ಡೆ ಅವರ ಹೇಳಿಕೆಯನ್ನು ಪ್ರತಿಭಟಿಸುವ ಭರದಲ್ಲಿ ಅವರ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯವಾದುದು.

ಪ್ರತಿಯೊಬ್ಬರ ವಿಚಾರಧಾರೆಗಳು ಒಂದೇ ಆಗಿರಬೇಕು ಎನ್ನುವ ಮನಸ್ಥಿತಿ ಸರಿಯಲ್ಲ. ಇದು ಸಮಾಜಕ್ಕೆ ಮಾರಕವಾಗುತ್ತದೆ. ಶಾಸಕರು ತನ್ನ ಕ್ಷೇತ್ರದ ಪ್ರತಿಯೊಂದು ಧರ್ಮ, ಜಾತಿಯ ಜನರನ್ನು ಒಂದಾಗಿ ಕೊಂಡೊಯ್ಯುವ ಜವಾಬ್ದಾರಿಯನ್ನು ಹೊಂದಿದ್ದು ಎಂದಿಗೂ ಕೂಡ ಅವರ ವರ್ತನೆ ಬೇಲಿಯೇ ಎದ್ದು ಹೊಲ ಮೇಯುವ ರೀತಿ ಆಗಬಾರದು ಎನ್ನುವ ಕನಿಷ್ಠ ಜ್ಞಾನ ಅವರಿಗೆ ಇರಬೇಕು. ನಾಯಕನಾದವನು ಸಂಸ್ಕಾರಯುತ ಸಮಾಜ ನಿರ್ಮಾಣ ಮಾಡಬೇಕು, ಸಮಾಜಕ್ಕೆ ಮಾದರಿಯಾಗಬೇಕೇ ವಿನಃ ಅವರೇ ಪ್ರಚೋದನೆಗೆ ಅವಕಾಶ ನೀಡಿದರೆ ಇದರಿಂದ ಮುಂದೆ ನಮ್ಮ ಸಮಾಜದ ಯುವಜನತೆಯು ಹಿಂಸಾತ್ಮಕ ಹಾದಿಯನ್ನು ಹಿಡಿಯಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ತಾನೊಬ್ಬ ಜವಾಬ್ದಾರಿಯುತ ಶಾಸಕ ಎನ್ನುವುದನ್ನು ಅರಿತು ಯಾವತ್ತೂ ಕೂಡ ಕೀಳು ಮಟ್ಟದ ವರ್ತನೆ ತೋರಲು ಹೋಗುವುದು ಸಮಾಜಕ್ಕೆ ಅಪಾಯಕಾರಿಯಾಗಿ ಪರಿಣಮಿಸಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಯ ಕುರಿತು ಹೆಚ್ಚಿನ ಗಮನ ಹರಿಸಲಿ ಎನ್ನುವುದು ಜನತೆಯ ಆಶಯವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (25-10-2024) ಚಿನ್ನದ ದರ

Gold 22 CT- Rs. 7295 Gold 24 CT- Rs. 7808 Silver-...

ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

ಉಡುಪಿ, ಅ.25: ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು...

ತ್ಯಾಜ್ಯ ನಿರ್ವಹಣೆಯಲ್ಲಿ ನಗರಸಭೆಯೊಂದಿಗೆ ಸಹಕರಿಸಿ

ಉಡುಪಿ, ಅ.25: ಉಡುಪಿ ನಗರಸಭೆಯು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿವಿಧ...

ಕಟ್ಟಡಗಳ ಭಗ್ನ ಅವಶೇಷಗಳನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಲು ಸೂಚನೆ

ಉಡುಪಿ, ಅ.25: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಎಲ್ಲೆಂದರಲ್ಲಿ...
error: Content is protected !!