Home ಸುದ್ಧಿಗಳು ಪ್ರಾದೇಶಿಕ ಪರೀಕ್ಷೆ ಎದುರಿಸುವ ತರಬೇತಿ

ಪರೀಕ್ಷೆ ಎದುರಿಸುವ ತರಬೇತಿ

182
0

ಉಡುಪಿ, ಮಾ.9: ಪರೀಕ್ಷೆ ಎಂಬುದು ನಮ್ಮ ಬದುಕಿನ ಅವಿಭಾಜ್ಯ ಅಂಗ. ಈ ವಿದ್ಯಾರ್ಥಿ ಜೀವನದ ಪರೀಕ್ಷೆ ಎಂಬ ಹಬ್ಬವನ್ನು ನಾವೆಲ್ಲರೂ ಆನಂದಿಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಬೇಕು ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು. ಅವರು ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ಸಿ.ಎಸ್.ಐ ಬಾಯ್ಸ್ ಬೋರ್ಡಿಂಗ್ ಹೋಮ್ ನಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪರೀಕ್ಷಾ ಸಮಯದಲ್ಲಿ ವೇಳಾಪಟ್ಟಿಯನ್ನು ತಯಾರಿಸಿ ಅದರಂತೆ ಪರೀಕ್ಷೆ ತಯಾರಿ ನಡೆಸಿದರೆ ಉತ್ತಮ. ಕಷ್ಟಪಟ್ಟು ಓದದೆ ಇಷ್ಟಪಟ್ಟು ಅಧ್ಯಯನ ಮಾಡಬೇಕು ಎಂದು ಅವರು ಕರೆ ನೀಡಿದರು.

ಅಧ್ಯಕ್ಷತೆಯನ್ನು ಜೇಸಿಐ ಉಡುಪಿ ಸಿಟಿ ಅಧ್ಯಕ್ಷರಾದ ಡಾ. ಹರಿಣಾಕ್ಷಿ ಕರ್ಕೇರ ವಹಿಸಿ ಪ್ರಸ್ತಾವಿಕವಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಪೂರ್ವ ಅಧ್ಯಕ್ಷ ಜಗದೀಶ್ ಶೆಟ್ಟಿ, ಉದಯ ನಾಯ್ಕ್, ಸಂಸ್ಥೆಯ ಮುಖ್ಯಸ್ಥರಾದ ಜಾನ್ ಸುದರ್ಶನ್ ಮುಂತಾದವರು ಉಪಸ್ಥಿತರಿದ್ದರು. ಮಹಿಳಾ ಜೆಸಿ ಸಂಯೋಜಕಿ ನಯನ ಉದಯ್ ನಾಯ್ಕ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.