Tuesday, February 25, 2025
Tuesday, February 25, 2025

ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ: ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ: ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

Date:

ಉಡುಪಿ, ಮಾ.10: ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ ಮತ್ತು ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

ಸಮಾಲೋಚನಾ ಸಭೆಯ ಸಂಪನ್ಮೂಲ ವ್ಯಕ್ತಿಗಳಾಗಿ ಅದಮಾರು ಎಜುಕೇಶನಲ್ ಕೌನ್ಸಿಲ್‍ನ ಆಡಳಿತಾಧಿಕಾರಿಯಾದ ಡಾ. ಎ. ಪಿ. ಭಟ್, ಸಂಸ್ಥೆಯ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಗೋಪಾಲಕೃಷ್ಣ ಭಟ್, ಉಪನ್ಯಾಸಕರೂ, ಕಲಾವಿದರೂ ಆದ ಶ್ರುತಕೀರ್ತಿ ರಾಜ್ ಭಾಗವಹಿಸಿದ್ದರು. ಸಂಸ್ಥೆಯ ದಾನಿ ಯು. ಎಸ್. ರಾಜಗೋಪಾಲ ಆಚಾರ್ಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾರ್ಗದರ್ಶಿ ಮಾತುಗಳನ್ನಾಡಿದರು.

ವಿದ್ಯಾಪೋಷಕ್ ಫಲಾನುಭವಿ, ಪ್ರಸ್ತುತ ಉದ್ಯೋಗದಲ್ಲಿರುವ ಪ್ರಜ್ವಲ್ ಶೆಟ್ಟಿ ಮತ್ತು ಸಿ.ಎ.ವಿದ್ಯಾರ್ಥಿನಿ ಕವನಾ ತಮ್ಮ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆಯ ದಾನಿಗಳಾದ ಎ. ಮುರಾರಿ ರಾವ್–ಚಂದ್ರಕಲಾ ರಾವ್ ದಂಪತಿಗಳು ನೀಡಿದ ಲ್ಯಾಪ್‍ಟಾಪ್‍ನ್ನು ವಿದ್ಯಾಪೋಷಕ್ ಇಂಜಿನೀಯರಿಂಗ್ ವಿದ್ಯಾರ್ಥಿನಿ ಅಖಿಲಾಳಿಗೆ ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿಯವರು ಹಸ್ತಾಂತರಿಸಿದರು. 230 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಶಿಬಿರದಲ್ಲಿ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ್, ಅಶೋಕ್ ಎಂ., ಗಣೇಶ್ ರಾವ್ ಎಲ್ಲೂರು ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!