Tuesday, February 25, 2025
Tuesday, February 25, 2025

ಮಣಿಪಾಲ: ಡಾ. ಭ್ರಮರಿ ಶಿವಪ್ರಕಾಶ್ ನೃತ್ಯ ಕಾರ್ಯಕ್ರಮ

ಮಣಿಪಾಲ: ಡಾ. ಭ್ರಮರಿ ಶಿವಪ್ರಕಾಶ್ ನೃತ್ಯ ಕಾರ್ಯಕ್ರಮ

Date:

ಮಣಿಪಾಲ, ಮಾ.11: ಮಂಗಳೂರಿನ ನಾದನೃತ್ಯ ಸ್ಕೂಲ್ ಆಫ್ ಡಾನ್ಸ್ ನ ನಿರ್ದೇಶಕಿ, ನೃತ್ಯ ಕಲಾವಿದೆ ಹಾಗೂ ಸಂಯೋಜಕಿ ಡಾ. ಭ್ರಮರಿ ಶಿವಪ್ರಕಾಶ್ ಇವರನ್ನು ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ಇದರ ಆಶ್ರಯದಲ್ಲಿ ಸನ್ಮಾನಿಸಲಾಯಿತು. ಹಲವಾರು ವರ್ಷಗಳಿಂದ ನೃತ್ಯ ನಿರ್ದೇಶನ, ಪ್ರಾಧ್ಯಾಪನ ಹಾಗೂ ನೃತ್ಯಕಲೆಯಲ್ಲಿ ತೊಡಗಿರುವ ಡಾ. ಭ್ರಮರಿ ಶಿವಪ್ರಕಾಶ್ ಇವರು ಇತ್ತೀಚಿಗಷ್ಟೇ ‘ಸಮೂಹ’ ತಂಡದ ರಂಗ ಪ್ರಯೋಗಗಳ ಕುರಿತು ಪಿಎಚ್ ಡಿ ಪದವಿಯನ್ನು ಪಡೆದಿದ್ಧಾರೆ. ‘ರಾಧೆ ಎಂಬ ಗಾಥೆ’, ‘ಊರ್ವಶಿ’, ‘ಪಾಂಚಾಲಿ’, ‘ಸೀತೆಯ ಸ್ವಗತ’ ಇವು ಅವರ ಪ್ರಮುಖ ಏಕವ್ಯಕ್ತಿ ಪ್ರಯೋಗಗಳಾದರೆ, ‘ನೆನಪಾದಳು ಶಕುಂತಲೆ’, ‘ಅಹಲ್ಯೆ’, ‘ಶಬರಿಗಾಯಿತು ಶ್ರೀ ರಾಮ ದರ್ಶನ’ ಇವು ಅವರ ಮುಖ್ಯ ನೃತ್ಯ ನಿರ್ದೇಶನಗಳು. ಜಿಸಿಪಿಎಎಸ್ ಮುಖ್ಯಸ್ಥ ಪ್ರೊ. ವರದೇಶ್ ಹಿರೇಗಂಗೆ ಇವರು ಡಾ. ಭ್ರಮರಿ ಶಿವಪ್ರಕಾಶ್ ಅವರನ್ನು ಸನ್ಮಾನಿಸಿ ಮಾತನಾಡಿದರು. ನಂತರ ಡಾ. ಭ್ರಮರಿ ಇವರ ನೃತ್ಯ ಕಾರ್ಯಕ್ರಮ ನಡೆಯಿತು. ಗೌತಮಿ ಮತ್ತು ಪ್ರೊ. ಕೌಸ್ತುಭಾ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದ್ದರು. ವಿಭಾಗದ ಎಲ್ಲಾ ಮಹಿಳಾ ಉದ್ಯೋಗಿಗಳನ್ನೂ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!