Tuesday, February 25, 2025
Tuesday, February 25, 2025

ಆಧುನಿಕ ಸಮಾಜದಲ್ಲಿ ಸಮಾಜಶಾಸ್ತ್ರೀಯ ಅಧ್ಯಯನಗಳು ಪ್ರಮುಖವಾಗುತ್ತವೆ: ಡಾ. ಗಿರಿಧರ ರಾವ್ ಎಂ.ಎಸ್

ಆಧುನಿಕ ಸಮಾಜದಲ್ಲಿ ಸಮಾಜಶಾಸ್ತ್ರೀಯ ಅಧ್ಯಯನಗಳು ಪ್ರಮುಖವಾಗುತ್ತವೆ: ಡಾ. ಗಿರಿಧರ ರಾವ್ ಎಂ.ಎಸ್

Date:

ತೆಂಕನಿಡಿಯೂರು, ಮಾ.20: ಸಮಾಜಶಾಸ್ತ್ರವು ಸಮಾಜದ ವೈಜ್ಞಾನಿಕ ಅಧ್ಯಯನವಾಗಿದ್ದು, ಆಧುನಿಕತೆಯಿಂದಾಗಿ ಬದಲಾಗುತ್ತಿರುವ ಸಾಮಾಜಿಕ ಸನ್ನಿವೇಶಗಳನ್ನು ಅರ್ಥೈಸಿಕೊಂಡು ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ನಿರ್ವಹಿಸುತ್ತವೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಡಾ. ಗಿರಿಧರ ರಾವ್ ಎಂ.ಎಸ್. ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ವತಿಯಿಂದ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ ಇದರ ಮಂಗಳೂರು ವಿ.ವಿ. ಆರನೇ ಸೆಮಿಸ್ಟರ್‌ನ ಪಠ್ಯಕ್ರಮದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವೈ. ರವೀಂದ್ರನಾಥ ರಾವ್, ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುನೀತಾ ವಿ. ಹಾಗೂ ಮಂಗಳೂರು ಫಾದರ್ ಮುಲ್ಲರ್ ಸಂಸ್ಥೆಯ ಪ್ರಾಧ್ಯಾಪಕಿ ಡಾ. ವೀಣಾ ಮನೋಜ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ವಿನಯ್ ರಜತ್ ಡಿ., ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಘವ ನಾಯ್ಕ, ಕಾರ್ಯಾಗಾರದ ಸಂಚಾಲಕ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದರು. ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ ವಿದ್ಯಾ ಎಸ್. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!