Tuesday, February 25, 2025
Tuesday, February 25, 2025

ವಿಪ್ರ ಮಹಿಳಾ ಬಳಗ: ವಿಶ್ವ ಮಹಿಳಾ ದಿನಾಚರಣೆ

ವಿಪ್ರ ಮಹಿಳಾ ಬಳಗ: ವಿಶ್ವ ಮಹಿಳಾ ದಿನಾಚರಣೆ

Date:

ಕೋಟ, ಮಾ.24: ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕೋಟ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಮಂಜುನಾಥ ಉಪಾಧ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರಕೀಯರ ದಾಳಿಯಿಂದ ನಮ್ಮ ಸಂಸ್ಕೃತಿ, ಸ್ವಾಭಿಮಾನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಸ್ವಾತಂತ್ರ್ಯ ಪೂರ್ವದಲ್ಲೆ ಭಾರತೀಯರ ಮೇಲೆ ಅದರಲ್ಲೂ ಇಲ್ಲಿನ ಮಹಿಳೆಯ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರಿದೆ. ನಾರಿಶಕ್ತಿ ವಿಜೃಂಭಿಸುವ ಕಾಲ ಇಂದು ಕಾಣುತ್ತಿದ್ದೇವೆ, ಅಸಮಾನತೆ ತೊಡೆದು ಹಾಕಿ ಸ್ವಾವಲಂಬಿ ಬದುಕಿಗೆ ಮಹಿಳೆ ಮುನ್ನುಡಿ ಬರೆಯುತ್ತಿದ್ದಾಳೆ. ಪುರುಷ ಪ್ರದಾನವಾದ ಈ ಸಮಾಜದಲ್ಲಿ ಮಹಿಳೆ ಕೂಡಾ ಸಮಾನವಾಗಿ ನಿಂತು ವಿವಿಧ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾಳೆ, ಇದೊಂದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ವಿಪ್ರ ಮಹಿಳಾ ಬಳಗದ ಅಧ್ಯಕ್ಷೆ ಗಾಯತ್ರಿ ಹೊಳ್ಳ ವಹಿಸಿದ್ದರು. ಮಣೂರು ಮಹಾಲಕ್ಷ್ಮಿ ಉರಾಳ ಇವರನ್ನು ವಿಪ್ರ ಮಹಿಳಾ ಬಳಗದ ಭಾಗ್ಯ ವಾದಿರಾಜ್ ಸನ್ಮಾನಿಸಿದರು. ಮುಖ್ಯ ಅತಿಥಿಯಾಗಿ ತೆಕ್ಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಶಾರದಾ ಹೊಳ್ಳ ಸ್ವಾವಲಂಬಿ ಬದುಕಿನ ಬಗ್ಗೆ ಮಾತನಾಡಿದರು. ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಪ್ರಬಂಧಕ ಮಂಜುನಾಥ ಉಪಾಧ್ಯ ಶುಭ ಹಾರೈಸಿದರು. ಸದಸ್ಯೆ ಸ್ಮಿತಾರಾಣಿ ವರದಿ ವಾಚಿಸಿದರು. ವಿಪ್ರ ಮಹಿಳಾ ಬಳಗದ ಮಾಜಿ ಅಧ್ಯಕ್ಷೆ ಜ್ಞಾನವಿ ಹೇರ್ಳೆ ಸ್ವಾಗತಿಸಿ, ಅತಿಥಿಗಳನ್ನು ಭಾರತಿ ಮಯ್ಯ ಪರಿಚಯಿಸಿದರು. ನರ್ಮದಾ ಹೇರ್ಳೆ ಸನ್ಮಾನ ಪತ್ರ ವಾಚಿಸಿದರು. ವಿಪ್ರ ಮಹಿಳಾ ಬಳಗದ ಸದಸ್ಯೆ ಸುಮನ ಹೇರ್ಳೇ ಕಾರ್ಯಕ್ರಮ ನಿರೂಪಿಸಿದರು. ಸದಸ್ಯೆ ಸುಜಾತ ಬಾಯರಿ ವಂದಿಸಿದರು. ಸಂಚಾಲಕಿ ವನಿತಾ ಉಪಾಧ್ಯಾ ಕಾರ್ಯಕ್ರಮ ಸಂಯೋಜಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!