Home ಸುದ್ಧಿಗಳು ಪ್ರಾದೇಶಿಕ ಆನಂದತೀರ್ಥ ಪ.ಪೂ ಕಾಲೇಜು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಆನಂದತೀರ್ಥ ಪ.ಪೂ ಕಾಲೇಜು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

200
0

ಕಟಪಾಡಿ, ಮಾ.25: ಪಾಜಕ ಆನಂದತೀರ್ಥ ಪ.ಪೂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಥಮ ವಾರ್ಷಿಕ ಪರೀಕ್ಷೆ ಮುಗಿಸಿ ಉನ್ನತ ವ್ಯಾಸಂಗಕ್ಕೆ ಹೋಗುತ್ತಿವುದರಿಂದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಆನಂದತೀರ್ಥ ಟ್ರಸ್ಟ್ ಕಾರ್ಯದರ್ಶಿ ಬಿ. ಸುಬ್ರಹ್ಮಣ್ಯ ಸಾಮಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ದ್ವಿತೀಯ ಪಿಯುಸಿ ಎಂಬುದು ಮಹತ್ವದ ಘಟ್ಟ. ಇಲ್ಲಿಂದ ಮುಂದೆ ಇಡುವ ಒಂದೊಂದು ಹೆಜ್ಜೆಯೂ ಜೀವನದ ನಿರ್ಣಾಯಕ ಹೆಜ್ಜೆಯಾಗಿರುತ್ತದೆ. ಉತ್ತಮ ಭವಿಷ್ಯ ರೂಪಿಸಿಕ್ಕೊಳ್ಳುವ ದೃಢವಾದ ಹೆಜ್ಜೆಯನ್ನು ಇಲ್ಲಿಂದಲೇ ಇಟ್ಟು, ಜೀವನದಲ್ಲಿ ಯಶಸ್ಸು ಪಡೆದುಕ್ಕೊಳ್ಳಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಕಾರ್ಯಧ್ಯಕ್ಷ ನಾಗರಾಜ್ ಬಲ್ಲಾಳ್, ಉಪಾಧ್ಯಕ್ಷ ಶ್ರೀಹರಿ ಭಟ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಸಂಸ್ಥೆಯ ಸದಸ್ಯ ಸುದರ್ಶನ್ ರಾವ್, ಪ್ರಾಂಶುಪಾಲ ವಿಜಯ್ ಪಿ ರಾವ್, ಉಪಪ್ರಾಂಶುಪಾಲೆ ಕಮಲಾಕ್ಷೀ ಪ್ರಕಾಶ್ ಉಪಸ್ಥಿತರಿದ್ದರು. ಸಂಸ್ಥೆಯ ಶಿಕ್ಷಕ, ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.