Home ಸುದ್ಧಿಗಳು ಪ್ರಾದೇಶಿಕ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕೋಟಿ ಗೀತಾ ಲೇಖನ ಅಭಿಯಾನ

ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕೋಟಿ ಗೀತಾ ಲೇಖನ ಅಭಿಯಾನ

129
0

ಉಡುಪಿ, ಮಾ.28: ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಕೋಟಿ ಗೀತಾ ಲೇಖನ ಅಭಿಯಾನದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಭಾಗಿಯಾಗಿರುವುದು ಶ್ಲಾಘನೀಯ. ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಸಂಕಲ್ಪದೊಂದಿಗೆ ಯುವಮೋರ್ಚಾ ಕಾರ್ಯಕರ್ತರು ಗೀತಾ ಲೇಖನ ಅಭಿಯಾನದಲ್ಲಿ ಭಾಗಿಯಾಗಿರುವುದು ಶ್ಲಾಘನೀಯವಾಗಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಉಡುಪಿ ಶ್ರೀಕೃಷ್ಣ ಮಠದ ಗೀತಾ ಮಂದಿರದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕಾರ್ಯಕರ್ತರಿಗೆ ಕೋಟಿ ಗೀತಾ ಲೇಖನ ಪುಸ್ತಕವನ್ನು ಹಸ್ತಾಂತರಿಸಿ ಅಶೀರ್ವಚಿಸಿದರು. ಶ್ರೀ ಕೃಷ್ಣನಿಗೆ ಅತ್ಯಂತ ಪ್ರಿಯವಾಗಿರುವ ಗೀತಾ ಸಂದೇಶವನ್ನು ಸಾರುವ ಕಾರ್ಯ ಅತ್ಯಂತ ಶ್ರೇಷ್ಠವಾಗಿದ್ದು, ಕೋಟಿ ಗೀತಾ ಲೇಖನ ಅಭಿಯಾನದದಲ್ಲಿ ತಮ್ಮನ್ನು ತೊಡಗಿಸಿಕೊಂಡ ತಮ್ಮ ಸಂಕಲ್ಪ ಸಾಕರಗೊಳ್ಳುವ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದರು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಶ್ರೀಪಾದರ ಆಶೀರ್ವಾದ ಪಡೆದು ಯುವಮೋರ್ಚಾ ಕಾರ್ಯಕರ್ತರ ಈ ಕಾರ್ಯ ಸರ್ವರಿಗೂ ಮಾದರಿಯಾಗಿ ಸಂಕಲ್ಪ ಸಿದ್ಧಿಯಾಗಲಿ ಎಂದರು. ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ರಾಜೇಶ್ ಕಾವೇರಿ ಮುಂತಾದವರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.