Tuesday, June 30, 2026
Tuesday, June 30, 2026

ಏ.8: ಕುಂದಾಪುರದ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ದೃಢ ಸಂಪ್ರೋಕ್ಷಣ ಕಲಶಾಭಿಷೇಕ

ಏ.8: ಕುಂದಾಪುರದ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ದೃಢ ಸಂಪ್ರೋಕ್ಷಣ ಕಲಶಾಭಿಷೇಕ

Date:

ಕುಂದಾಪುರ, ಏ.4: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇಗುಲದ ಸನ್ನಿಧಿಯಲ್ಲಿ ಅಷ್ಟಬಂಧ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ 48 ದಿನಗಳ ನಂತರ ನಡೆಯುವ ದೃಢ ಸಂಪ್ರೋಕ್ಷಣೆಯು ಏಪ್ರಿಲ್ 8 ರಂದು ನಡೆಯಲಿದೆ. ಅಂದು ಬೆಳಿಗ್ಗೆ 9ಕ್ಕೆ ಪುಣ್ಯಾಹ, ನವಕ ಪ್ರಧಾನ, ಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ಶ್ರೀ ಮಹಾಕಾಳಿ ಭಜನಾ ಮಂಡಳಿ- ಖಾರ್ವಿಕೇರಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ 8.30ಕ್ಕೆ ವಿಶೇಷ ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿ.ಎ. ಇಂಟರ್ ಮೀಡಿಯಟ್‌ನ ಎರಡೂ ಗ್ರೂಪ್‌ಗಳಲ್ಲಿ ಪನ್ನಗ ತೇರ್ಗಡೆ

ಕುಂದಾಪುರ, ಜೂ.30: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ...

ಅಫ್ಘಾನ್ ಭೂಪ್ರದೇಶದ ಮೇಲೆ ಪಾಕ್ ವಾಯುದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ

ನವದೆಹಲಿ, ಜೂ.30: ಅಫ್ಘಾನಿಸ್ತಾನದ ವಸತಿ ಪ್ರದೇಶಗಳಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಮಹಿಳೆಯರು...

ಮಂಗಳೂರು: ರಕ್ಷಣಾ ಕಾರ್ಯಾಚರಣೆಯಲ್ಲಿ ಆರು ಮೀನುಗಾರರ ರಕ್ಷಣೆ

ಮಂಗಳೂರು, ಜೂ.30: ಮಂಗಳೂರಿನ ಕರಾವಳಿಯಲ್ಲಿ ಸಮುದ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ...

ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಉಡುಪಿ, ಜೂ.30: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ...
error: Content is protected !!