Home ಸುದ್ಧಿಗಳು ಪ್ರಾದೇಶಿಕ ಏ.8: ಕುಂದಾಪುರದ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ದೃಢ ಸಂಪ್ರೋಕ್ಷಣ ಕಲಶಾಭಿಷೇಕ

ಏ.8: ಕುಂದಾಪುರದ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ದೃಢ ಸಂಪ್ರೋಕ್ಷಣ ಕಲಶಾಭಿಷೇಕ

129
0

ಕುಂದಾಪುರ, ಏ.4: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇಗುಲದ ಸನ್ನಿಧಿಯಲ್ಲಿ ಅಷ್ಟಬಂಧ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ 48 ದಿನಗಳ ನಂತರ ನಡೆಯುವ ದೃಢ ಸಂಪ್ರೋಕ್ಷಣೆಯು ಏಪ್ರಿಲ್ 8 ರಂದು ನಡೆಯಲಿದೆ. ಅಂದು ಬೆಳಿಗ್ಗೆ 9ಕ್ಕೆ ಪುಣ್ಯಾಹ, ನವಕ ಪ್ರಧಾನ, ಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ಶ್ರೀ ಮಹಾಕಾಳಿ ಭಜನಾ ಮಂಡಳಿ- ಖಾರ್ವಿಕೇರಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ 8.30ಕ್ಕೆ ವಿಶೇಷ ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.