Tuesday, February 25, 2025
Tuesday, February 25, 2025

ಮತಗಟ್ಟೆ ಅಧಿಕಾರಿಗಳಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ

ಮತಗಟ್ಟೆ ಅಧಿಕಾರಿಗಳಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ

Date:

ಉಡುಪಿ, ಏ.4: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 119-ಕುಂದಾಪುರ, 120-ಉಡುಪಿ, 121- ಕಾಪು ಮತ್ತು 122-ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಅಗತ್ಯವಿರುವ ಮತಗಟ್ಟೆ ಅಧ್ಯಕ್ಷ ಅಧಿಕಾರಿಗಳಿಗೆ ಮತ್ತು ಸಹಾಯಕ ಅಧ್ಯಕ್ಷö ಅಧಿಕಾರಿಗಳಿಗೆ ಮಾರ್ಚ್ 22 ರಂದು ನೇಮಕಾತಿ ಆದೇಶದೊಂದಿಗೆ ಅಂಚೆ ಮತಪತ್ರ ಕೋರಿಕೆ ಅರ್ಜಿ ನಮೂನೆ-12 ಮತ್ತು ಚುನಾವಣಾ ಕರ್ತವ್ಯ ಪ್ರಮಾಣ ಪತ್ರ ಕೋರಿಕೆ ನಮೂನೆ -12 ಎ ಜಾರಿಮಾಡಲಾಗಿರುತ್ತದೆ. ಈ ನಮೂನೆಗಳನ್ನು ಸ್ವೀಕರಿಸದೇ ಇರುವ ಅಧಿಕಾರಿಗಳು ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಅಥವಾ ತಹಶೀಲ್ದಾರರ ಕಚೇರಿಗೆ ತೆರಳಿ ನಮೂನೆಗಳನ್ನು ಪಡೆಯಬಹುದಾಗಿದೆ. ಇದೇ ರೀತಿ ಇತರೆ ಮತಗಟ್ಟೆ ಅಧಿಕಾರಿಗಳಿಗೆ ನೇಮಕಾತಿ ಆದೇಶ ಜಾರಿ ಪ್ರಕ್ರಿಯೆ ಆರಂಭಗೊಂಡಿದ್ದು, ಒಂದು ವೇಳೆ ನಮೂನೆ 12 ಮತ್ತು 12 ಎ ಸ್ವೀಕರಿಸದೇ ಇದ್ದಲ್ಲಿ ಅವರು ಸಹ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಅಥವಾ ತಹಶೀಲ್ದಾರರ ಕಚೇರಿಗೆ ತೆರಳಿ ನಮೂನೆಗಳನ್ನು ಪಡೆಯಬಹುದಾಗಿದೆ.

ಪ್ರಸ್ತುತ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಈ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಮತದಾನ ದಿನದಂದು ಮತಗಟ್ಟೆ ಕರ್ತವ್ಯಕ್ಕಾಗಿ ನಿಯೋಜಿಸಿದ ಎಲ್ಲಾ ಮತಗಟ್ಟೆ ಅಧಿಕಾರಿಗಳು ಈ ಮೇಲೆ ಸೂಚಿಸಿದಂತೆ ಅಗತ್ಯತೆಗೆ ಅನುಸಾರವಾಗಿ ನಮೂನೆ 12 ಮತ್ತು 12 ಎ ಗಳನ್ನು ಪಡೆದು, ಏಪ್ರಿಲ್ 07 ರ ಒಳಗಾಗಿ ಭರಿಸಿದ ನಮೂನೆಗಳನ್ನು ಚುನಾವಣಾ ಗುರುತಿನ ಚೀಟಿ ನಕಲು ಪ್ರತಿ ಮತ್ತು ನೇಮಕಾತಿ ಆದೇಶದ ನಕಲು ಪ್ರತಿಯೊಂದಿಗೆ ಕೋರಿಕೆಯನ್ನು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಎರಡನೇ ಹಂತದ ತರಬೇತಿ ವೇಳೆಯಲ್ಲಿ ಅಂಚೆ ಮತದಾನಕ್ಕೆ ಅರ್ಹರಿರುವ ಮತದಾರರಿಗೆ ತರಬೇತಿ ಕೇಂದ್ರಗಳಲ್ಲಿ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಿ ಅಂಚೆ ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...
error: Content is protected !!