Friday, September 20, 2024
Friday, September 20, 2024

ಹರ್ಷ ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ

ಹರ್ಷ ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ

Date:

ಉಡುಪಿ: ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ನಡೆದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.

ಹಿಂದೂ ಯುವ ಕಾರ್ಯಕರ್ತನ ಕಗ್ಗೊಲೆ ಆತಂಕಕಾರಿಯಾಗಿದೆ. ಈ ಹತ್ಯೆ ಪ್ರಕರಣ ಹಿಂದೂ ಸಮಾಜವನ್ನು ಭೀತಿಗೊಳಪಡಿಸುವ ದುಷ್ಕೃತ್ಯವಾಗಿದೆ.

ಮೊಘಲ್ ಕಾಲದಿಂದಲೂ ಈ ರೀತಿಯ ಭೀತಿ ಇದ್ದರೂ ಕೂಡ ಹಿಂದೂ ಸಮಾಜ ಯಾವುದಕ್ಕೂ ಜಗ್ಗದೆ ತಲೆ ಎತ್ತಿ ನಿಂತಿದೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಹಿಂದೂ ಸಮಾಜ ಎಂದೂ ಸೊಪ್ಪು ಹಾಕದು.

ಈ ಹಿಂದೆಯೂ ರಾಜ್ಯದಲ್ಲಿ ನಡೆದ ಹಲವಾರು ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಕಾರಣರಾಗಿರುವ ಸಮಾಜಘಾತುಕ ಶಕ್ತಿಗಳ ಕೈವಾಡ ಹರ್ಷ ಹತ್ಯೆಯಲ್ಲೂ ಇದೆಯೋ ಎಂಬ ಬಗ್ಗೆ ಕೂಲಂಕುಷ ತನಿಖೆಯ ಅಗತ್ಯವಿದೆ.

ಈ ನಿಟ್ಟಿನಲ್ಲಿ ಹರ್ಷ ಹತ್ಯೆ ಪ್ರಕರಣವನ್ನು ತಕ್ಷಣ ಎನ್ಐಎ ಗೆ ಹಸ್ತಾಂತರಿಸುವ ಮೂಲಕ ದುಷ್ಕರ್ಮಿಗಳನ್ನು ಶೀಘ್ರ ಪತ್ತೆಹಚ್ಚಿ ಹಂತಕರಿಗೆ ಕಾನೂನಾತ್ಮಕ ಗಲ್ಲು ಶಿಕ್ಷೆಯನ್ನು ವಿಧಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಲ್ಲಿ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!