Tuesday, February 25, 2025
Tuesday, February 25, 2025

‘ನಮ್ಮ ಆರೋಗ್ಯ ನಮ್ಮ ಹಕ್ಕು’ ಕೇವಲ ಘೋಷಣೆಯಾಗಬಾರದು: ಡಾ. ಆಶೋಕ್

‘ನಮ್ಮ ಆರೋಗ್ಯ ನಮ್ಮ ಹಕ್ಕು’ ಕೇವಲ ಘೋಷಣೆಯಾಗಬಾರದು: ಡಾ. ಆಶೋಕ್

Date:

ಉಡುಪಿ, ಏ.10: ಪ್ರತಿಯೊಬ್ಬ ಮನುಷ್ಯನ ಬದುಕಿನಲ್ಲಿ ಆರೋಗ್ಯವು ಅತಿ ಮುಖ್ಯ. ಇಂದಿನ ಯುವಕರಲ್ಲಿ ಆರೋಗ್ಯದ ಕುರಿತಾದ ಅರಿವಿನ ಕೊರತೆಯಿದೆ. ಈ ದೃಷ್ಟಿಯಿಂದ ಆರೋಗ್ಯದ ಕುರಿತಾದ ಮಾಹಿತಿಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ನೀಡಬೇಕು. ವಿಶ್ವ ಆರೋಗ್ಯ ಸಂಸ್ಥೆಯು ನೀಡಿರುವ ನಮ್ಮ ಆರೋಗ್ಯ ನಮ್ಮ ಹಕ್ಕು ಎಂಬುದು ಕೇವಲ ಘೋಷಣೆಯಾಗಬಾರದು. ಅದು ಬದುಕಿನಲ್ಲಿ ಅಳವಡಿಕೆಯಾಗಬೇಕೆಂದು ಉಡುಪಿ ಜಿಲ್ಲಾಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ. ಆಶೋಕ್ ಕುಮಾರ್ ಎಚ್. ಹೇಳಿದರು. ಅವರು ರೆಡ್ ಕ್ರಾಸ್ ಸಂಸ್ಥೆಯಲ್ಲಿ ‘ನಮ್ಮ ಆರೋಗ್ಯ ನಮ್ಮ ಹಕ್ಕು’ ಎಂಬ ಘೋಷಣೆಯಡಿ ನಡೆದ ವಿಶ್ವ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ವಹಿಸಿದ ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿಯವರು ರೆಡ್ ಕ್ರಾಸ್ ಸಂಸ್ಥೆಯ ಆರೋಗ್ಯ ಕಾರ್ಯಕ್ರಮಗಳು ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ಕ್ರಾಸ್ ಸಂಚಾಲಕಿ ಡಾ. ದಿವ್ಯಾ ಎಂ. ಎಸ್ ಭಾಗವಹಿಸಿ ಉತ್ತಮ ಆರೋಗ್ಯಕರ ಜೀವನ ನಡೆಸುವ ಬಗ್ಗೆ ಮಾಹಿತಿ ನೀಡಿದರು. ರೆಡ್ ಕ್ರಾಸ್ ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಮಾಜಿ ಖಜಾಂಚಿ ಚಂದ್ರಶೇಖರ್ ವಂದಿಸಿದರು. ಪ್ರಾಧ್ಯಾಪಕಿ ಡಾ. ನಿಕೇತನ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!