Monday, February 24, 2025
Monday, February 24, 2025

ರೆಡ್‌ಕ್ರಾಸ್ ಸಂಸ್ಥೆಯಿಂದ ಮಾನವೀಯ ನೆಲೆಯಲ್ಲಿ ಸೇವೆ

ರೆಡ್‌ಕ್ರಾಸ್ ಸಂಸ್ಥೆಯಿಂದ ಮಾನವೀಯ ನೆಲೆಯಲ್ಲಿ ಸೇವೆ

Date:

ಉಡುಪಿ, ಏ.12: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ಮಾನವಜೀವನ ಮತ್ತು ಆರೋಗ್ಯವನ್ನು ರಕ್ಷಿಸಲು ಇರುವ ಸ್ವಯಂ ಪ್ರೇರಿತ ಮಾನವೀಯ ಸಂಸ್ಥೆಯಾಗಿದ್ದು, ವಿಪತ್ತು, ತುರ್ತು ಪರಿಸ್ಥಿತಿ ಸಮಯದಲ್ಲಿ ಪರಿಹಾರ ನೀಡುವುದು, ದುರ್ಬಲ ಜನರ ಮತ್ತು ಸಮುದಾಯಗಳ ಆರೋಗ್ಯವನ್ನು ಕಾಪಾಡುವುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು. ಅವರು ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆ ಹಾಗೂ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಇವರ ಸಹಯೋಗದೊಂದಿಗೆ ವಿಶ್ವ ಆರೋಗ್ಯ ದಿನದ ಅಂಗವಾಗಿ ನಡೆದ ಪ್ರಥಮ್ ಚಿಕಿತ್ಸೆ ಕುರಿತ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರೆಡ್‌ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು ಯುವರೆಡ್‌ಕ್ರಾಸ್ ಸಂಸ್ಥೆಯು ಪ್ರಥಮ ಚಿಕಿತ್ಸೆಯಲ್ಲಿ ಮಾಡಿದ ಸಾಧನೆಯ ಬಗ್ಗೆ ಹಾಗೂ ರಕ್ತದಾನ, ಅಂಗಾಂಗ ದಾನ, ನಿಧಿ ಸಂಗ್ರಹಿಸುವ ಚಟುವಟಿಕೆಗಳು, ಪ್ರವಾಹ ಪರಿಹಾರ ಅಭಿಯಾನಗಳು ಮತ್ತು ವಿಪತ್ತು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿ, ಯುವಜನತೆಯು ತಮ್ಮ ಬಿಡುವಿನ ಸಮಯದಲ್ಲಿ ಇಂತಹ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರಿನ ಪ್ರಥಮ ಚಿಕಿತ್ಸಾ ತರಬೇತಿದಾರ ಅಶ್ವಿನ್ ಕುಮಾರ್ ಎಂ, ಪ್ರಥಮ ಚಿಕಿತ್ಸಾ ಕೌಶಲ್ಯ, ಮೌಲ್ಯ ಮತ್ತು ವಿವಿಧ ಸಂದರ್ಭಗಳಲ್ಲಿ ಅದನ್ನು ಹೇಗೆ ನೀಡಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದ ಅವರು, ವಿದ್ಯಾರ್ಥಿಗಳು ತಾವು ಪಡೆದ ಮಾಹಿತಿಯನ್ನು ಇತರ ವಿದ್ಯಾರ್ಥಿಗಳಿಗೆ ನೀಡುವಂತೆ ತಿಳಿಸಿದರು. ಗಾಯಗಳು, ರಕ್ತಸ್ರಾವ, ಸುಟ್ಟಗಾಯಗಳು, ಶಾಖದ ಹೊಡೆತ, ವಿಷ, ಹಾವು ಕಡಿತ, ಮುಳುಗುವಿಕೆ, ಮೂರ್ಛೆ ಮತ್ತು ಪ್ರಜ್ಞಾಹೀನತೆ ಮುಂತಾದ ಸ್ಥಿತಿಯಲ್ಲಿ ಪ್ರಥಮ ಚಿಕಿತ್ಸೆ ಹೇಗೆ ನೀಡಬೇಕು ಎಂಬುದರ ಕುರಿತು ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ವಿವಿಧ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿಗಳು ಮತ್ತು ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಾಷ್ಟ್ರೀಯ ಸೇವಾಯೋಜನೆಯ ಸಂಯೋಜಕ ನಾಗರಾಜ್ ರಾವ್ ಸ್ವಾಗತಿಸಿ, ಪ್ರಿನ್ಸಿಟಾ ಮೆನೆಜಸ್ ನಿರೂಪಿಸಿ, ಮೈತ್ರಿ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!