Monday, February 24, 2025
Monday, February 24, 2025

ಪಾಂಡೇಶ್ವರ ರಕ್ತೇಶ್ವರಿ ದೇಗುಲದಲ್ಲಿ ವರ್ಧಂತ್ಯುತ್ಸವ ಸಂಪನ್ನ

ಪಾಂಡೇಶ್ವರ ರಕ್ತೇಶ್ವರಿ ದೇಗುಲದಲ್ಲಿ ವರ್ಧಂತ್ಯುತ್ಸವ ಸಂಪನ್ನ

Date:

ಕೋಟ, ಏ.13: ಇಲ್ಲಿನ ಪಾಂಡೇಶ್ವರದ ರಕ್ತೇಶ್ವರಿ ಅಮ್ಮನವರ ನಾಗಾಧೀ ಪರಿವಾರ ದೇಗುಲದಲ್ಲಿ ವಾರ್ಷಿಕ ವರ್ಧಂತ್ಯುತ್ಸವ ಕಾರ್ಯಕ್ರಮ ಶುಕ್ರವಾರ ಸಂಪನ್ನಗೊಂಡಿತು. ಪೂರ್ವಾಹ್ನ ಸಾಮೂಹಿಕ ಪ್ರಾರ್ಥನೆ, ನವಕುಂಭ ಸ್ಥಾಪನೆ, ಬ್ರಹ್ಮಲಿಂಗ ದೇವರಿಗೆ ಶತರುದ್ರ, ದುರ್ಗಾಹೋಮ, ಕಲಶಾಭಿಷೇಕ, ತುಲಾಭಾರಸೇವೆ, ಅಪರಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಸರ್ವಾಲಂಕಾರ ಸೇವೆ, ದೀಪೋತ್ಸವ, ಮಹಾಮಂಗಳಾರತಿ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳನ್ನು ವೇ.ಮೂ ಕಾರ್ಕಡ ರತ್ನಾಕರ ಸೋಮಯಾಜಿ ನೇತೃತ್ವದಲ್ಲಿ ನಡೆಯಿತು. ರಾತ್ರಿ ಬೆಳಕಿನ ಸೇವಾ ಭಾಗವಾಗಿ ವೀರಭದ್ರ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರಿಂದ ಅಬ್ಬರದ ಬೊಬ್ಬರ್ಯ ಪ್ರಸಂಗ ಪ್ರದರ್ಶನಗೊಂಡಿತು. ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಕಾರ್ಯಕ್ರಮದ ನೇತೃತ್ವ ವಹಿಸಿದರು. ರಕ್ತೇಶ್ವರಿ ಬಳಗದ ಅಧ್ಯಕ್ಷ ನಾರಾಯಣ ವಿ ಆಚಾರ್, ರಕ್ತೇಶ್ವರಿ ಮಹಿಳಾ ಬಳಗ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!