Monday, February 24, 2025
Monday, February 24, 2025

ಹಾವಂಜೆ: ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರ

ಹಾವಂಜೆ: ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರ

Date:

ಹಾವಂಜೆ, ಏ.13: ಭಾವನಾ ಫೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದಲ್ಲಿ ಸಂಯೋಜಿಸುತ್ತಿರುವ ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರವು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಮಣಿಪಾಲದ ವೈದ್ಯೆ ಡಾ. ಮಾಧುರಿ ಭಟ್ ಇವರಿಂದ ಉದ್ಘಾಟನೆಗೊಂಡಿತು. ಸ್ವಚ್ಚಂದದ ಪರಿಸರದಲ್ಲಿ ಭಾವನಾ ಫೌಂಡೇಶನ್ ಸಂಘಟಿಸುತ್ತಿರುವ ಬೇಸಿಗೆ ಶಿಬಿರವು ಬಹು ಮಹತ್ವಪೂರ್ಣವಾದುದು ಮತ್ತು ಇಂದಿನ ಆಧುನಿಕ ಜೀವನದ ನಡುವೆ ಸಾಂಪ್ರದಾಯಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಅಭಿಪ್ರಾಯವಿತ್ತರು. ಮುಖ್ಯ ಅತಿಥಿಗಳಾಗಿ ಅಡ್ವೋಕೇಟ್ ಮುಗ್ಗೇರಿ ನಾಗರಾಜ ಭಟ್, ಭಾವನಾ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷರಾದ ಯಕ್ಷಗುರು ಹಾವಂಜೆ ಮಂಜುನಾಥ ರಾವ್ ಹಾಗೂ ಶಿಬಿರ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ, ವಿಶುರಾವ್ ಹಾವಂಜೆ ಹಾಗೂ ಉದಯ್ ಕೋಟ್ಯಾನ್ ಉಪಸ್ಥಿತರಿದ್ದರು. ಈ ಬೇಸಿಗೆ ಶಿಬಿರವು ನಾಲ್ಕು ದಿನಗಳ ಕಾಲ ನಡೆಯಲಿದ್ದು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ನಿಟ್ಟಿನಲ್ಲಿ ರೂಪಿಸಲಾಗಿದೆ. ಬಿಹಾರದ ಜನಪದ ಕಲೆಗಳ ಕಲಿಕೆ, ಕಸದಿಂದ ರಸ, ಪಕ್ಷಿ ವೀಕ್ಷಣೆ, ಮನೆಮದ್ದು, ಗ್ರಾಮೀಣ ಆಟಗಳು, ಬಟ್ಟೆಯ ಮೇಲೆ ಮುದ್ರಣ ಕಲೆ ಮುಂತಾಗಿ ಹತ್ತು ಹಲವಾರು ಅಂಶಗಳನ್ನು ಶಿಬಿರದಲ್ಲಿ ಕಲಿಸಿ ಕೊಡಲಾಗುತ್ತಿದೆ. ಶಿಬಿರದ ಸಮಾರೋಪ ಸಮಾರಂಭವು ದಿನಾಂಕ ೧೪ನೇ ಭಾನುವಾರದಂದು ಸಂಜೆ ೨:೩೦ಕ್ಕೆ ನೆರವೇರಲಿದ್ದು, ಇದೇ ಸಂದರ್ಭದಲ್ಲಿ ‘ಕಲಾ ಸಿಂಧು’ ಪುರಸ್ಕಾರವನ್ನು ವಿದುಷಿ ಪವನ ಬಿ. ಆಚಾರ್ ಹಾಗೂ ಭಾವನಾ ಪುರಸ್ಕಾರವನ್ನು ಹೋಂ ಡಾಕ್ಟರ್ ಪೌಂಡೇಶನ್‌ನ ಡಾ. ಶಶಿಕಿರಣ್ ಶೆಟ್ಟಿಯವರಿಗೆ ನೀಡಿ ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ಉಡುಪಿಯ ಪ್ರಭಾವತಿ ವಿ. ಶೆಣೈ ಹಾಗೂ ಉದ್ಯಮಿಗಳಾದ ಆನಂದ ಕಾರ್ನಾಡ್‌ ಉಪಸ್ಥಿತರಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!