Home ಸುದ್ಧಿಗಳು ಪ್ರಾದೇಶಿಕ ಹಿರಿಯಡಕ: ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾ ವಿಧಿ

ಹಿರಿಯಡಕ: ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾ ವಿಧಿ

588
0

ಹಿರಿಯಡಕ, ಏ.15: ಹಿರಿಯಡಕದ ಸುರಭಿ ಬಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ನಡೆದ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲ್ ಅವರ ಪುತ್ರ ಸಾಯೀಶ್ ಇವರ ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನಡೆಯಿತು. ಕರ್ಜೆ ಗ್ರಾಮ ಪಂಚಾಯತ್ ಇದರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿರಾಜ್ ಪ್ರತಿಜ್ಞಾ ವಿಧಿ ಬೋಧಿಸಿದರು. ಜೇಸಿಐ ಉಡುಪಿ ಸಿಟಿ ಅಧ್ಯಕ್ಷರಾದ ಡಾ. ಹರಿಣಾಕ್ಷಿ, ಜೆಸಿಐ ಪದಾಧಿಕಾರಿಗಳು, ಸದಸ್ಯರು, ಸೌಮ್ಯ, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.

ಏಪ್ರಿಲ್ ತಿಂಗಳಲ್ಲಿ ಹಲವಾರು ಮದುವೆ, ಗೃಹಪ್ರವೇಶ, ಬ್ರಹ್ಮೋಪದೇಶ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ನೂರಾರು ಜನರು ಸೇರಿದಾಗ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರೆ ಶೇಕಡವಾರು ಮತದಾನ ಹೆಚ್ಚಳವಾಗಲು ಪರಿಣಾಮಕಾರಿ ಪ್ರಯತ್ನವಾಗಲಿದೆ ಎನ್ನುತ್ತಾರೆ ರಾಘವೇಂದ್ರ ಪ್ರಭು ಕರ್ವಾಲು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.