Home ಸುದ್ಧಿಗಳು ಪ್ರಾದೇಶಿಕ ಎಳೆಬಿಸಿಲು ಬೇಸಿಗೆ ಶಿಬಿರ ಉದ್ಘಾಟನೆ

ಎಳೆಬಿಸಿಲು ಬೇಸಿಗೆ ಶಿಬಿರ ಉದ್ಘಾಟನೆ

179
0

ಕೋಟ, ಏ.15: ಮಣೂರು ಪಡುಕರೆ ಸರಕಾರಿ ಸಂಯುಕ್ತ ಪ್ರೌಢಶಾಲಾ ವಠಾರದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಲ್ಲಿ ಎಳೆಬಿಸಿಲು (ಇದು ಶಾಲೆಯಲ್ಲ ಬಯಲು) ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು. ಶಿಬಿರವು ಏಪ್ರಿಲ್ 21 ರವರೆಗೆ ನಡೆಯಲಿದೆ. ಮಣೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನ್ನಿಸ್ ಬಾಂಜಿ, ಆಯೋಜಕರಾದ ರಮೇಶ ಕುಂದರ್ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಜಯರಾಮ ಶೆಟ್ಟಿ ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ಸತ್ಯನಾರಾಯಣ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಮಂಜುನಾಥ ಹೊಳ್ಳ ಮತ್ತು ಗೀತಾನಂದ ಫೌಂಡೇಶನ್ ಸಂಯೋಜಕರಾದ ರವಿಕಿರಣ್ ಇವರು ಶಿಬಿರಾರ್ಥಿಗಳೊಂದಿಗೆ ಲಗೋರಿ ಆಡುವುದರ ಮೂಲಕ ಉದ್ಘಾಟಿಸಿದರು. ವ್ಯೆಷ್ಣವಿ ರಕ್ಷಿತ್ ಕುಂದರ್ ಮತ್ತು ಜನತಾ ಸಿಬ್ಬಂದಿ ಅಶ್ವಿನಿ, ಸಚಿನ್ ಮತ್ತು ಶಿಬಿರಾರ್ಥಿಗಳು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.