Home ಸುದ್ಧಿಗಳು ಪ್ರಾದೇಶಿಕ ಬಾರಕೂರು: ‘ಪಿ.ಆರ್.ಎ’ ಕಾರ್ಯಾಗಾರ

ಬಾರಕೂರು: ‘ಪಿ.ಆರ್.ಎ’ ಕಾರ್ಯಾಗಾರ

72
0

ಬಾರಕೂರು, ಏ.21: ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗ, ಐಕ್ಯೂಎಸಿ ಜಂಟಿ ಆಶ್ರಯದಲ್ಲಿ ಒಂದು ದಿನದ ಪಿ.ಆರ್.ಎ ಕಾರ್ಯಾಗಾರ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಉಪನ್ಯಾಸಕಿ ಡಾ. ಪ್ರಮೀಳಾ ಜೆ. ವಾಸ್ ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡಿದರು. ಸ್ನಾತಕೋತ್ತರ ಸಮಾಜಕಾರ್ಯ ಮುಖ್ಯಸ್ಥರಾದ ಡಾ. ಹೇಮಾ ಎಸ್. ಕೊಡದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಕಾರ್ಯ ವೇದಿಕೆಯ ಸಂಯೋಜಕಿ ಡಾ. ಶ್ರೀದೇವಿ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಮಜಕಾರ್ಯ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು. ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಯರಾದ ಗೌತಮಿ ಸ್ವಾಗತಿಸಿ, ಸ್ಪಂದನಾ ವಂದಿಸಿದರು. ಮೇಘನಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.