Home ಸುದ್ಧಿಗಳು ಪ್ರಾದೇಶಿಕ ಸಮಾಜಸೇವಕ ಆನಂದ್ ಸಿ ಕುಂದರ್‌ರವರ ಜನ್ಮದಿನಾಚರಣೆ; ಅನಾಥಾಶ್ರಮಕ್ಕೆ ಕೊಡುಗೆ

ಸಮಾಜಸೇವಕ ಆನಂದ್ ಸಿ ಕುಂದರ್‌ರವರ ಜನ್ಮದಿನಾಚರಣೆ; ಅನಾಥಾಶ್ರಮಕ್ಕೆ ಕೊಡುಗೆ

154
0

ಬ್ರಹ್ಮಾವರ, ಏ. 27: ಆನಂದ್ ಸಿ ಕುಂದರ್ ರವರ ವ್ಯಕ್ತಿತ್ವವೇ ವಿಶಿಷ್ಟವಾದದ್ದು. ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ ಎಂದು ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಹೇಳಿದರು. ಸಮಾಜಸೇವಕ ಆನಂದ್ ಸಿ ಕುಂದರ್ ರವರ ಹುಟ್ಟುಹಬ್ಬವನ್ನು ಕೋಟದ ಪಂಚವರ್ಣ ಯುವಕ ಮಂಡಲದ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಬ್ರಹ್ಮಾವರದ ಅಪ್ಪ ಅಮ್ಮ ಅನಾಥಾಶ್ರಮಕ್ಕೆ ಹಣ್ಣು ಹಂಪಲು, ಬಟ್ಟೆ ಪರಿಕರ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಸೌಮ್ಯ ಸ್ವಭಾವದಲ್ಲಿ ಜನಸಾಮಾನ್ಯರ ನಾಡಿಮಿಡಿತಗಳಿಗೆ ಸ್ಪಂದಿಸುವ ಅವರ ಗುಣ ಶ್ರೇಷ್ಠವಾದದ್ದು. ಅವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಪಂಚವರ್ಣ ಸಂಸ್ಥೆಯ ಕಾರ್ಯ ಶ್ಲಾಘನೀಯ. ಅಪ್ಪ ಅಮ್ಮ ಅನಾಥಾಶ್ರಮ ಅಶಕ್ತರ ಬಾಳಿಗೆ ಬೆಳಕು ತರುವ ಕಾರ್ಯ ಮಾಡುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದರು.

ಕೋಟ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಅಪ್ಪ ಅಮ್ಮ ಅನಾಥಾಶ್ರಮದ ಮುಖ್ಯಸ್ಥ ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು. ಮಹಿಳಾ ಮಂಡಲದ ಪ್ರಧಾನ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿ, ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶಕೀಲ ವಂದಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.