Home ಸುದ್ಧಿಗಳು ಪ್ರಾದೇಶಿಕ ಬಾಳೆಕುದ್ರು ಶ್ರೀಮಠಕ್ಕೆ ಹರಿಹರಪುರ ಸ್ವಾಮೀಜಿ ಭೇಟಿ

ಬಾಳೆಕುದ್ರು ಶ್ರೀಮಠಕ್ಕೆ ಹರಿಹರಪುರ ಸ್ವಾಮೀಜಿ ಭೇಟಿ

126
0

ಬ್ರಹ್ಮಾವರ, ಏ.27: ಇಲ್ಲಿನ ಹಂಗಾರಕಟ್ಟೆ ಬಾಳೆಕುದ್ರು ಶ್ರೀಮಠಕ್ಕೆ ಚಿಕ್ಕಮಗಳೂರು ಹರಿಹರಪುರ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸ್ವರಸ್ವತಿ ಸ್ವಾಮೀಜಿ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನ ಜಯೇಂದ್ರಪುರಿ ಸ್ವಾಮೀಜಿ ಅವರು ಶ್ರೀ ಮಠದ ನೃಸಿಂಹಾಶ್ರಮ ಸ್ವಾಮೀಜಿಯರನ್ನು ಭೇಟಿ ಮಾಡಿದರು. ಉಭಯ ಸ್ವಾಮೀಜಿಯವರನ್ನು ವಾದ್ಯಘೋಷಗಳೊಂದಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಶ್ರೀ ಮಠದ ಲಕ್ಷ್ಮಿ ನರಸಿಂಹ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳು ಆಶೀರ್ವಚನ ನೀಡಿದರು. ಸ್ವಾಮೀಜಿ ಆಗಮನದ ಹಿನ್ನಲೆಯಲ್ಲಿ ಕುಂದಾಪುರ ತಾಲೂಕು ಭಜನಾ ಒಕ್ಕೂಟದ ಶ್ರೀ ಕುಂದೇಶ್ವರ ಭಜನಾ ಮಂಡಳಿ, ಬ್ರಹ್ಮಶ್ರೀ ನಾರಾಯಣಗುರು ಭಜನಾ ಮಂಡಳಿ ಹಂಗಾರಕಟ್ಟೆ ಇವರುಗಳಿಂದ ಭಜನೆ, ರಾಮ ಕ್ಷತ್ರಿಯ ಮಹಿಳಾ ಮಂಡಳಿ ಕುಂದಾಪುರ ಇವರಿಂದ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣೆ ನಡೆಯಿತು. ಶ್ರೀ ಮಠದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜಶೇಖರ ಕಲ್ಕೂರ, ಸದಸ್ಯರಾದ ಪಾಮರ ಚಡಗ, ಮಠದ ವ್ಯವಸ್ಥಾಪಕಾರ ಮಂಜುನಾಥ ಭಟ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.