Home ಸುದ್ಧಿಗಳು ಪ್ರಾದೇಶಿಕ ವೈಭವಿ ಆಚಾರ್ಯ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಯಶ್ಪಾಲ್ ಸುವರ್ಣ

ವೈಭವಿ ಆಚಾರ್ಯ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಯಶ್ಪಾಲ್ ಸುವರ್ಣ

137
0

ಉಡುಪಿ, ಏ.28: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿ ರಾಜ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ವಿದ್ಯೋದಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಉಡುಪಿ ಸುಬ್ರಹ್ಮಣ್ಯನಗರದ ವೈಭವಿ ಆಚಾರ್ಯ ರವರಿಗೆ ಅವರ ನಿವಾಸದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಉಡುಪಿ ನಗರ ಬಿಜೆಪಿ ವತಿಯಿಂದ ಸನ್ಮಾನಿಸಿ, ರೂ.10,000 ಪ್ರತಿಭಾ ಪುರಸ್ಕಾರ ನೀಡಿ ಅಭಿನಂದನೆ ಸಲ್ಲಿಸಿದರು.

ಸನ್ಮಾನ ನೆರವೇರಿಸಿ ಮಾತನಾಡಿದ ಯಶ್ಪಾಲ್ ಸುವರ್ಣ, ವೈಭವಿ ಆಚಾರ್ಯ ನಿರಂತರ ಪರಿಶ್ರಮದಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉನ್ನತ ಅಂಕ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದು, ಈ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಹಾಗೂ ಪೊಡವಿಗೊಡೆಯ ಉಡುಪಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹದಿಂದ ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ನಗರ ಸಭಾ ಸದಸ್ಯರಾದ ಜಯಂತಿ ಪೂಜಾರಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ವೈಭವಿ ಶೆಟ್ಟಿ ಪೋಷಕರಾದ ಶಂಖಪಾಲ ಆಚಾರ್ಯ, ವಿದ್ಯಾ ಎಸ್. ಆಚಾರ್ಯ, ಪಕ್ಷದ ಪ್ರಮುಖರಾದ ಉಮೇಶ್ ಶೆಟ್ಟಿ, ಚಿನ್ಮಯಮೂರ್ತಿ, ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.