Home ಸುದ್ಧಿಗಳು ಪ್ರಾದೇಶಿಕ ಹಂದೆ ದೇಗುಲ: ಸ್ವಚ್ಛತಾ ಕಾರ್ಯ

ಹಂದೆ ದೇಗುಲ: ಸ್ವಚ್ಛತಾ ಕಾರ್ಯ

102
0

ಕೋಟ, ಮೇ 6: ಕೋಟದ ಹಂದೆ ಮಹಾಗಣಪತಿ ಮಹಾವಿಷ್ಣು ದೇಗುಲದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯ ನಡೆಯಿತು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ ೨೦೬ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ದೇಗುಲವನ್ನು ಸ್ವಚ್ಛಗೊಳಿಸಲಾಯಿತು. ದೇಗುಲದ ಅಧ್ಯಕ್ಷ ಅಮರ್ ಹಂದೆ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ, ಹಂದಟ್ಟು ಮಹಿಳಾ ಬಳಗದ ಪುಷ್ಭಾ ಕೆ ಹಂದಟ್ಟು ಮುಂತಾದವರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.