Home ಸುದ್ಧಿಗಳು ಪ್ರಾದೇಶಿಕ ಹೂಡಿಕೆ ಬ್ಯಾಂಕಿಂಗ್: ಕಾರ್ಯ ಮತ್ತು ಅವಕಾಶಗಳು

ಹೂಡಿಕೆ ಬ್ಯಾಂಕಿಂಗ್: ಕಾರ್ಯ ಮತ್ತು ಅವಕಾಶಗಳು

99
0

ತೆಂಕನಿಡಿಯೂರು, ಮೇ 10: ಹೂಡಿಕೆ ಬ್ಯಾಂಕಿಂಗ್ ಸರಕಾರ ನಿಗಮ ಮತ್ತು ಸಂಸ್ಥೆಗಳಿಗೆ ಅಗತ್ಯವಿರುವ ಬಂಡವಾಳ ಸಂಗ್ರಹಣೆ ವಿಲೀನಗಳು ಮತ್ತು ಸ್ವಾಧೀನಗಳ ಸೇವೆಯನ್ನ ಒದಗಿಸುವ ಕಾರ್ಯವನ್ನು ವಹಿಸುತ್ತದೆ, ವಿದ್ಯಾರ್ಥಿಗಳು ಸದರಿ ಇನ್ವೆಸ್ಟ್ಮೆಂಟ್ ಬ್ಯಾಂಕಿನ ಪ್ರಕ್ರಿಯೆ ಮತ್ತು ಉದ್ಯೋಗಾವಕಾಶಗಳನ್ನು ಅರಿತು, ಪಡೆದುಕೊಳ್ಳುವ ಅಗತ್ಯತೆ ಇದೆ ಎಂದು ಶ್ರೀ ಮಾಧವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜೀಸ್ ಅಂಡ್ ಮ್ಯಾನೇಜ್ಮೆಂಟ್ ಬಂಟಕಲ್ಲು ಉಡುಪಿಯ ಪ್ರೊ ಅಭಯ್ ಕುಮಾರ್ ಹೇಳಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ವಿಭಾಗ, ಐ.ಕ್ಯೂ.ಎ.ಸಿ., ಹಾಗೂ ಪ್ಲೇಸ್ಮೆಂಟ್ ಸಹಯೋಗದೊಂದಿಗೆ ಆಯೋಜಿದ ಇನ್ವೆಸ್ಟ್ಮೆಂಟ್ ಬ್ಯಾಂಕಿಂಗ್ ಮತ್ತು ಉದ್ಯೋಗಾವಕಾಶ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಸದರಿ ಕಾರ್ಯಗಾರದಲ್ಲಿ ನಿರ್ದೇಶಕರಾದ ಸೂರಜ್ ವಿದ್ಯಾರ್ಥಿಗಳಿಗೆ ತರಬೇತಿಯೊಂದಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ವ್ಯವಹಾರ ಅಧ್ಯಯನ ವಿಭಾಗ ಮುಖ್ಯಸ್ಥ ರಘು ನಾಯ್ಕ, ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಮತ್ತು ಭರವಶ ಕೋಶ ಸಂಚಾಲಕಿ ಡಾ ಮೇವಿ ಮಿರಾಂದ, ಪ್ಲೇಸ್ಮೆಂಟ್ ಸಂಚಾಲಕರಾದ ದಿನೇಶ್ ಎಂ., ಮತ್ತು ಉಮೇಶ್ ಪೈ, ಡಾ. ಗೀತಾ ಎನ್., ಉಪನ್ಯಾಸಕರಾದ ಸ್ಮಿತಾ ಹೆಗ್ಡೆ, ನಮಿತಾ ಹೆಗ್ಡೆ, ಧನ್ಯ, ಆರತಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.