Monday, February 24, 2025
Monday, February 24, 2025

ಪರಿಸರ ಕಾಳಜಿ ವಹಿಸಿ: ರವೀಂದ್ರ ತಿಂಗಳಾಯ

ಪರಿಸರ ಕಾಳಜಿ ವಹಿಸಿ: ರವೀಂದ್ರ ತಿಂಗಳಾಯ

Date:

ಕೋಟ, ಮೇ 12: ಪರಿಸರದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಇಲ್ಲದಿದ್ದರೆ ಪ್ರಸ್ತುತ ಅನುಭವಿಸುವ ಉಷ್ಣತೆ ಮತ್ತಷ್ಟು ತೀವ್ರಗೊಳ್ಳಲಿದೆ. ಈ ಬಗ್ಗೆ ಇವಾಗಲೇ ಜಾಗೃತರಾಗುವುದು ಒಳಿತು ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಪಡುಕರೆ ವಾರ್ಡ್ ಸದಸ್ಯ ರವೀಂದ್ರ ತಿಂಗಳಾಯ ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ ಕೋಟತಟ್ಟು ಗ್ರಾಮ ಪಂಚಾಯತ್, ಟೀಮ್ ಭವಾಬ್ಧಿ ಪಡುಕರೆ ಸಂಯೋಜನೆಯೊಂದಿಗೆ ೨೦೭ನೇ ಭಾನುವಾರದ ಪರಿಸರ ಸ್ನೇಹಿ ಕಾರ್ಯಕ್ರಮದ ಸಲುವಾಗಿ ಕೋಟತಟ್ಟು ಪಡುಕರೆ ಬೀಚ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರದ ಬಗ್ಗೆ ಇತ್ತೀಚಿಗಿನ ದಿನಗಳಲ್ಲಿ ನಿರ್ಲಕ್ಷ್ಯ ಹೆಚ್ಚಾಗುತ್ತಿದೆ. ಎಲ್ಲಂದರಲ್ಲಿ ತ್ಯಾಜ್ಯಗಳು ಎಸೆಯುವ ಮನಸ್ಥಿತಿ ಸೃಷ್ಟಿಯಾಗುತ್ತಿದೆ. ಈ ರೀತಿಯ ಮನಸ್ಥಿತಿ ಮಾರಕವಾಗಲಿದೆ ಎಂದರು.

ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್, ಟೀಮ್ ಭವಾಬ್ಧಿ ಪ್ರಮುಖರಾದ ದೇವೇಂದ್ರ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್, ಶ್ರೀ ಚಿತ್ತಾರಿ ಟ್ರಸ್ಟ್ ಸಹಕಾರ ನೀಡಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!