Monday, February 24, 2025
Monday, February 24, 2025

ಸಾಧಕರನ್ನು ಗೌರವಿಸುವುದು ಶ್ರೇಷ್ಠವಾದ ಕಾರ್ಯ: ಗಣಪತಿ ಶ್ರೀಯಾನ್

ಸಾಧಕರನ್ನು ಗೌರವಿಸುವುದು ಶ್ರೇಷ್ಠವಾದ ಕಾರ್ಯ: ಗಣಪತಿ ಶ್ರೀಯಾನ್

Date:

ಕೋಟ, ಮೇ 13: ಸಾಧಕರನ್ನು ಗುರುತಿಸಿ ಅವರಿಗೆ ವಿಶೇಷ ಗೌರವ ಸಲ್ಲಿಸುವ ಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದು ಮಾಜಿ ಜಿ.ಪಂ ಸದಸ್ಯ ಗಣಪತಿ ಟಿ. ಶ್ರೀಯಾನ್ ಹೇಳಿದರು. ಕೊರವಡಿ ಮಲಸಾವರಿ ದೇಗುಲದ ವಠಾರದಲ್ಲಿ ಮಹಾಂಕಾಳಿ ಫ್ರೆಂಡ್ಸ್ ಕೊರವಡಿ ಇದರ 24 ನೇ ವರ್ಷೋತ್ಸವ ಸಂಭ್ರಮ ನಮ್ಮೂರ ಪರ್ವ -2024 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಘ ಸಂಸ್ಥೆಗಳು ಗ್ರಾಮದಲ್ಲಿ ಸಾಂಸ್ಕೃತಿಕ ಚಿಂತನೆಗಳನ್ನು ಪಸರಿಸಿ ಪ್ರೇರಣೆದಾಯಕ ಕಾರ್ಯಗಳನ್ನು ಹಮ್ಮಿಕೊಂಡು, ಈಶ್ವರ್ ಮಲ್ಪೆಯಂತಹ ಸಾಧಕರಿಗೆ ಗೌರವ ಸಲ್ಲಿಸುವ ಮಹತ್ತರವಾದ ಕಾರ್ಯಕ್ಕೆ ಸಾಕ್ಷಿಯಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಮಹಾಂಕಾಳಿ ಫ್ರೆಂಡ್ಸ್ ಸಾಮಾಜಿಕ ಕೈಂಕರ್ಯ ಗ್ರಾಮದ ಏಳಿಗೆಯ ಪ್ರತೀಕವಾಗಿದೆ ಎಂದರು. ಸಮಾಜಸೇವಕ ಈಶ್ವರ ಮಲ್ಪೆಯವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ನಿವೃತ್ತ ಸೈನಿಕ ರವೀಂದ್ರ ಕಾಂಚನ್ ಅವರಿಗೆ ಹುಟ್ಟೂರ ಅಭಿನಂದನೆ ಸಲ್ಲಿಸಲಾಯಿತು. ಸಭಾಧ್ಯಕ್ಷತೆಯನ್ನು ಕುಂಭಾಶಿ ಗ್ರಾ.ಪಂ ಅಧ್ಯಕ್ಷ ಆನಂದ್ ಪೂಜಾರಿ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಮಹಾಂಕಾಳಿ ದೈವಸ್ಥಾನದ ಅನುವಂಶಿಕ ಮೊಕ್ತೇಸರ ಲಕ್ಷ್ಮಿ ಹತ್ವಾರ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಡಿ ಮುಖ್ಯ ಶಿಕ್ಷಕಿ ಮಾಲತಿ ಶೆಟ್ಟಿ, ಮಹಾಂಕಾಳಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸೋಮ ಕಾಂಚನ್, ಮಹಾಂಕಾಳಿ ಫ್ರೆಂಡ್ಸ್ ಅಧ್ಯಕ್ಷ ಗಣೇಶ್ ಚಂದನ್ ಮತ್ತಿತರರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ವಿಜಯ ಶ್ರೀಯಾನ್ ಸ್ವಾಗತಿಸಿ, ಮಾಜಿ ಅಧ್ಯಕ್ಷ ಹರೀಶ್ ಚಂದನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!