Thursday, September 19, 2024
Thursday, September 19, 2024

ಕೆ.ಎಂ.ಸಿ ಮಣಿಪಾಲ: ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

ಕೆ.ಎಂ.ಸಿ ಮಣಿಪಾಲ: ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Date:

ಮಣಿಪಾಲ, ಮೇ 16: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಅಬಾಟ್ ಹೆಲ್ತ್‌ಕೇರ್ ಪ್ರೈ. ಲಿ. ನ ಸಹಯೋಗದೊಂದಿಗೆ ಕ್ಲಿನಿಕಲ್ ಪೌಷ್ಟಿಕಾಂಶ ಅಭ್ಯಾಸಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮವು ಗೌರವಾನ್ವಿತ ಅತಿಥಿಗಳು ಮತ್ತು ಪ್ರಮುಖ ವೈದ್ಯಕೀಯ ವೃತ್ತಿಪರರನ್ನು ಒಳಗೊಂಡಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೆಎಂಸಿ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಅತಿಥಿಗಳಾಗಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಉಪಸ್ಥಿತರಿದ್ದರು. ಉಪ ವೈದ್ಯಕೀಯ ಅಧೀಕ್ಷಕರು ಮತ್ತು ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿಯ ಪ್ರಾಧ್ಯಾಪಕರಾದ ಡಾ.ಶಿರನ್ ಶೆಟ್ಟಿ ಮತ್ತು ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯೆಟಿಕ್ಸ್ ವಿಭಾಗದ ಪ್ರಭಾರಿ ಮತ್ತು ಸಹಾಯಕ ಪ್ರಾಧ್ಯಾಪಕರಾದ ಸುವರ್ಣ ಹೆಬ್ಬಾರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ, ಡಾ.ಶಿರನ್ ಶೆಟ್ಟಿ ಅವರು ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮದ ಅವಲೋಕನವನ್ನು ನೀಡಿದರು. ನಿರಂತರ ಆರೈಕೆಯಲ್ಲಿ ಅಪೌಷ್ಟಿಕತೆ ಮತ್ತು ಸ್ನಾಯುವಿನ ನಷ್ಟವು ಪ್ರಚಲಿತವಾಗಿದೆ ಎಂದು ಅಭಿಪ್ರಾಯಪಟ್ಟರು. ಅವರು ವೈದ್ಯಕೀಯ ಅಭ್ಯಾಸದಲ್ಲಿ ಪೌಷ್ಟಿಕತೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ರೋಗಿಗಳಿಗೆ ಸಾರ್ಕೊಪೆನಿಯಾ ಮೌಲ್ಯಮಾಪನದ ಅಗತ್ಯದ ಬಗ್ಗೆ ಹೇಳಿದರು. ಅಬಾಟ್ ಹೆಲ್ತ್‌ಕೇರ್‌ನ ಮನೋಜ್ ಅವರು ಕಸ್ತೂರ್ಬಾ ಆಸ್ಪತ್ರೆಗೆ ಪೌಷ್ಟಿಕಾಂಶದ ಮಾಪನ ಕಿಟ್ (ನ್ಯೂಟ್ರಿಷನ್ ಎಸ್ಸೇಸ್ಮೆಂಟ್ ಕಿಟ್ ) ಅನ್ನು ಹಸ್ತಾಂತರಿಸಿದರು, ಇದು ಪೌಷ್ಟಿಕಾಂಶದ ಆರೈಕೆಯನ್ನು ಮುಂದುವರಿಸಲು ಸಹಯೋಗದ ಬದ್ಧತೆಯನ್ನು ಸಂಕೇತಿಸುತ್ತದೆ. ಸುವರ್ಣ ಹೆಬ್ಬಾರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!